Advertisement

ಹಿರಿಯ ನಾಗರಿಕರೊಂದಿಗೆ ಎಚ್‌ಡಿಕೆ ಸಂವಾದ ಇಂದು

12:46 PM Jan 03, 2018 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆ ತಯಾರಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಹಿರಿಯ ನಾಗರಿಕರೊಂದಿಗೆ ಸಂವಾದ ನಡೆಸಲಿದ್ದಾರೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಡೀ ದಿನ ಸಂವಾದ ನಡೆಯಲಿದ್ದು, ಹಿರಿಯ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ.

Advertisement

ಸೇವೆಯಿಂದ ನಿವೃತ್ತಿಯಾದ ನಂತರ ಹಿರಿಯ ನಾಗರಿಕರು ಎದುರಿಸುತ್ತಿರುವ ಸಮಸ್ಯೆಗಳು, ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸವಲತ್ತು, ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗುತ್ತಿರುವ ಲೋಪ -ದೋಷ ಕುರಿತು ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಹಿರಿಯ ನಾಗರಿಕರಿಗಾಗಿ ರೂಪಿಸುವ ಕಾರ್ಯಕ್ರಮಗಳ ಬಗ್ಗೆಯೂ ಸಂವಾದದಲ್ಲಿ ಕುಮಾರಸ್ವಾಮಿ ಮಾಹಿತಿ ನೀಡಲಿದ್ದಾರೆ. ಜೆಡಿಎಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಹಿರಿಯ ನಾಗರಿಕ ಕಲ್ಯಾಣಕ್ಕಾಗಿ ಸೇರ್ಪಡೆ ಮಾಡಬೇಕಾದ ಅಂಶಗಳ ಬಗ್ಗೆ ಸಲಹೆ-ಸೂಚನೆ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.

ಇದಾದ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ನಿರಂತರ ಪ್ರವಾಸ ನಡೆಸಲಿರುವ ಕುಮಾರಸ್ವಾಮಿ ಅದರ ನಡುವೆ ಮೈಸೂರಿನಲ್ಲಿ ಹಿರಿಯ ಸಾಹಿತಿಗಳು-ಚಿಂತಕರ ಜತೆ ಹಾಗೂ ಬೆಂಗಳೂರಿನಲ್ಲಿ ಐಟಿ-ಬಿಟಿ ವಲಯದವರ ಜತೆಯೂ ಸಂವಾದ ನಡೆಸಲಿದ್ದಾರೆ ಎಂದು ಜೆಡಿಎಸ್‌ ಶಾಸಕ ಗೋಪಾಲಯ್ಯ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next