Advertisement

ಭವಿಷ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರದ ಗದ್ದುಗೆ

04:55 PM Jul 03, 2020 | Naveen |

ಹಟ್ಟಿ ಚಿನ್ನದ ಗಣಿ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ ಪದಗ್ರಹಣದ ನೇರ ಪ್ರಸಾರ ವೀಕ್ಷಣೆಗೆ ಹಟ್ಟಿ ಜಿಪಂ ಸದಸ್ಯೆ ಸಾಹೇರಾಬೇಗಂ ತಮ್ಮ ಕಾರ್ಯಾಲಯದಲ್ಲಿ ಚಾಲನೆ ನೀಡಿದರು.

Advertisement

ಈ ವೇಳೆ ಮಾತನಾಡಿದ ಯುವ ಮುಖಂಡ ಅಮ್ಜದ್‌ ಸೇಠ್ ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಡಿ.ಕೆ. ಶಿವಕುಮಾರ ಪಕ್ಷದಲ್ಲಿ ಯುವಕರಿಗೆ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಏರಲಿದೆ. ಯುವಕರು ಪಕ್ಷದ ಬೆಳವಣಿಗೆಗೆ ಶ್ರಮವಹಿಸಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ
ಅನ್ನಭಾಗ್ಯ, ಕ್ಷೀರಭಾಗ್ಯ, ಬಿಸಿಯೂಟ, ಶಾದಿ ಭಾಗ್ಯ ಸೇರಿದಂತೆ ಹಲವಾರು ಜನಪರವಾದ ಮತ್ತು ಬಡವರ ಪರವಾದ ಯೋಜನೆಗಳನ್ನು ಜಾರಿಗೊಳಿಸಿದೆ.

ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಬಡವರ ಮತ್ತು ಕೂಲಿ ಕಾರ್ಮಿಕರ ಜೀವನ ಸಂಕಷ್ಟದಿಂದ ಕೂಡಿದ ಈ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆ ಮಹತ್ವ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಹೇಳಿದರು. ಪಟ್ಟಣ ಪಂಚಾಯತಿ ಸದಸ್ಯ ಎಂ.ಡಿ. ಸಮ್ದಾನಿ ರಜಾಕ್‌, ಸಯ್ಯದ್‌ ಇಸ್ಮಾಯಿಲ್‌ ಖಾದ್ರಿ (ಗೋರಿ), ಗುರುಲಿಂಗಪ್ಪ, ಸಯ್ಯದ್‌ ಪಾಷಾ, ಬಂದೇನವಾಜ್‌, ಅಮರಪ್ಪ ಮಾಲಿಪಾಟೀಲ, ಅಮರಪ್ಪ ಕಾರಲಕುಂಟಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next