Advertisement

Maharashtra ಚುನಾವಣೆಗೂ ಮುನ್ನ ನನ್ನನ್ನು ಬಲಿಪಶು ಮಾಡಲಾಗಿದೆ: ರಾವುತ್

07:28 PM Sep 26, 2024 | Team Udayavani |

ಮುಂಬಯಿ: ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ನಂತರ ತನ್ನನ್ನು ಬಲಿಪಶುವನ್ನಾಗಿ ಮಾಡಲಾಗಿದೆ. ಈ ತೀರ್ಪನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಗುರುವಾರ(ಸೆ26) ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ಪ್ರಧಾನ ಮಂತ್ರಿ “ಮೋದಕ” ತಿನ್ನಲು ಭಾರತದ ಮುಖ್ಯ ನ್ಯಾಯಮೂರ್ತಿಗಳ ನಿವಾಸಕ್ಕೆ ಭೇಟಿ ನೀಡಿದಾಗ ಭ್ರಷ್ಟಾಚಾರ ಮತ್ತು ಇತರ ವಿಷಯಗಳ ವಿರುದ್ಧ ಧ್ವನಿ ಎತ್ತುವ ನಮ್ಮಂತಹ ಜನರಿಗೆ ಹೇಗೆ ನ್ಯಾಯ ಸಿಗುತ್ತದೆ ಎಂದು ಸಿಜೆಐ ಡಿ.ವೈ. ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ಗಣೇಶ ಚತುರ್ಥಿ ಸಂದರ್ಭದಲ್ಲಿ ಭೇಟಿ ನೀಡಿರುವ ವಿಚಾರ ಉಲ್ಲೇಖಿಸಿ ಅಸಮಾಧಾನ ಹೊರ ಹಾಕಿದರು.

”ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಬರುತ್ತಿದ್ದು ನನ್ನನ್ನು ಬಲಿಪಶು ಮಾಡಲಾಗಿದೆ. ದೇಶದ ಸಂಪೂರ್ಣ ನ್ಯಾಯಾಂಗವು ಮೇಲಿನಿಂದ ಕೆಳಗಿನವರೆಗೆ ಸಂಘಿಕರಣ, ಆರ್‌ಎಸ್‌ಎಸ್ ನಿಂದ ಪ್ರಭಾವಿತವಾಗಿದೆ. ನಾನು ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ ಮತ್ತು ನಮಗೆ ಹೇಗೆ ಅನ್ಯಾಯವಾಗಿದೆ ಎಂದು ನಾವು ಜನರಿಗೆ ಹೇಳುತ್ತೇವೆ” ಎಂದರು.

ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಗುರುವಾರ ರಾಜ್ಯಸಭಾ ಸದಸ್ಯ ರಾವುತ್ ಅವರಿಗೆ 15 ದಿನಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಬಳಿಕ 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next