Advertisement

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಕಾರು : ಇಬ್ಬರು ಸ್ಥಳದಲ್ಲೇ ಸಾವು

11:22 AM Dec 30, 2020 | Team Udayavani |

ಹಾವೇರಿ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ತುಂಗಭದ್ರಾ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಬುಧವಾರ ನಡೆದಿದೆ.

Advertisement

ಮೃತರನ್ನು ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳಾದ ಪ್ರಕಾಶ ಬನ್ನಿಮಟ್ಟಿ (40) ಮತ್ತು ಸಿದ್ದನಗೌಡ ಬಿಷ್ಟನಗೌಡರ (45) ಎನ್ನಲಾಗಿದೆ.

ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಇಬ್ಬರು ಕಾರಿನಲ್ಲಿ ಹಾವೇರಿಗೆ ಬರುತ್ತಿದ್ದರು ಎನ್ನಲಾಗಿದೆ, ಅಪಘಾತದಲ್ಲಿ ಮೃತಪಟ್ಟ ಪ್ರಕಾಶ ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದರು.

ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next