Advertisement
1952ರಿಂದ 2009ರವರೆಗೆ ಧಾರವಾಡ ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಸೇರಿದ್ದ ಹಾವೇರಿ, 2008ರಲ್ಲಿ ಕ್ಷೇತ್ರ ಮರು ವಿಂಗಡನೆಯಾದ ಬಳಿಕ ಪ್ರತ್ಯೇಕ ಲೋಕಸಭೆ ಕ್ಷೇತ್ರವಾಗಿದೆ. ಪ್ರಸ್ತುತ ಕ್ಷೇತ್ರದಲ್ಲಿ ಕಾಂಗ್ರೆಸ್ನ 7, ಬಿಜೆಪಿಯ ಓರ್ವ ಶಾಸಕರಿದ್ದಾರೆ. 2019ರಲ್ಲಿ ಐದರಲ್ಲಿ ಬಿಜೆಪಿ, ಎರಡರಲ್ಲಿ ಕಾಂಗ್ರೆಸ್, ಓರ್ವ ಕೆಪಿಜೆಪಿ ಶಾಸಕರಿದ್ದರು. ಈವರೆಗೂ ನಡೆದ 17 ಚುನಾವಣೆಗಳಲ್ಲಿ 12 ಬಾರಿ ಕಾಂಗ್ರೆಸ್, 4 ಬಾರಿ ಬಿಜೆಪಿ, ಒಮ್ಮೆ ಲೋಕಶಕ್ತಿ ಪಕ್ಷ ಗೆಲುವು ಸಾಧಿ ಸಿದೆ.ಅನುಭವಿ ರಾಜಕಾರಣಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿಯಿಂದ ಕಣಕ್ಕಿಳಿದಿದ್ದರೆ, ಕಾಂಗ್ರೆಸ್ನಿಂದ ಹೊಸ ಮುಖ ಆನಂದಸ್ವಾಮಿ ಗಡ್ಡದೇವರಮಠ ಸ್ಪಧಿಸಿದ್ದಾರೆ. ವಿಶೇಷವೆಂದರೆ ಲೋಕಸಭೆ ಚುನಾವಣೆಗೆ ಇಬ್ಬರೂ ಹೊಸಬರು. ಮೊದಲ ಬಾರಿ ಸ್ಪರ್ಧಿಸುತ್ತಿದ್ದಾರೆ.
Related Articles
Advertisement
ಲೋಕಸಭೆ ಚುನಾವಣೆಯಲ್ಲಿ ಸತತ 4 ಬಾರಿ ಬಿಜೆಪಿ ಗೆಲುವು ಸಾಧಿಸಿ ಭದ್ರಕೋಟೆಯಾಗಿ ಮಾಡಿಕೊಂಡಿದೆ. ಸತತ ಸೋಲುಗಳಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಈ ಬಾರಿ ಬಿಜೆಪಿ ಗೆಲುವಿಗೆ ಬ್ರೇಕ್ ಹಾಕಲು ಕಸರತ್ತು ನಡೆಸಿದೆ. ಶಾಸಕರ ಸಂಖ್ಯಾಬಲ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು, ಗ್ಯಾರಂಟಿ ಯೋಜನೆ ಗಳು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸಿದೆ. ಬಿಜೆಪಿಯ ಬಸವರಾಜ ಬೊಮ್ಮಾಯಿ ಕೇಂದ್ರದ ಬಿಜೆಪಿ ಸರಕಾರದ ಸಾಧನೆ, ಮೋದಿ ಅಲೆ, ತಾವು ಸಿಎಂ ಆಗಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೆಚ್ಚಿಕೊಂಡಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಾಯಕ. ಎರಡೂ ಪಕ್ಷಗಳು ಅದೇ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಇನ್ನು ಮುಸ್ಲಿಂ, ಪರಿಶಿಷ್ಟ ಜಾತಿ-ಪಂಗಡ, ಕುರುಬ ಸೇರಿ ಹಿಂದುಳಿದ ವರ್ಗಕ್ಕೆ ಸೇರಿದ ಮತದಾರರೂ ಗಣನೀಯ ಸಂಖ್ಯೆಯಲ್ಲಿದ್ದಾರೆ. ಲಿಂಗಾಯತ ಮತಗಳು ವಿಭಜನೆಯಾದರೆ ಉಳಿದ ಸಮುದಾಯದವರ ಮತಗಳನ್ನು ಹೆಚ್ಚಿಗೆ ಪಡೆದವರು ಗೆಲುವಿನ ದಡ ಸೇರಲಿದ್ದಾರೆ.
ಬಸವರಾಜ ಬೊಮ್ಮಾಯಿ ಮೈತ್ರಿ ಅಭ್ಯರ್ಥಿ ಸಾಮರ್ಥ್ಯಮೋದಿ ಅಲೆ, ಕೇಂದ್ರ ಬಿಜೆಪಿ ಸರಕಾರದ ಸಾಧನೆ
ಸಿಎಂ ಆಗಿದ್ದಾಗ ಮಾಡಿದ ಕೆಲಸಗಳು
ಕ್ಷೇತ್ರದ ಜತೆಗಿರುವ ಒಡನಾಟ, ಬಿಗಿ ಹಿಡಿತ ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ಹತ್ತು ವರ್ಷದಲ್ಲಿ ಬಲಿಷ್ಠ ದೇಶವನ್ನಾಗಿ ಮಾಡಿದ್ದಾರೆ. ಅವರ ಬಗ್ಗೆ ದೇಶಾದ್ಯಂತ ಅಲೆ ಇದೆ. ಜತೆಗೆ ಸಿಎಂ ಆಗಿದ್ದ ವೇಳೆ ಕ್ಷೇತ್ರದಲ್ಲಿ ಕೈಗೊಂಡ ಜನಪರ ಕಾರ್ಯಗಳು ಚುನಾವಣೆಯಲ್ಲಿ ಸಹಕಾರಿಯಾಗಲಿವೆ. ಆನಂದಸ್ವಾಮಿ ಗಡ್ಡದೇವರಮಠ ಕಾಂಗ್ರೆಸ್ ಅಭ್ಯರ್ಥಿ ಸಾಮರ್ಥ್ಯ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು
ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯಾಬಲ
ಕ್ಷೇತ್ರದಲ್ಲಿ ನಿರಂತರವಾಗಿ ಗುರುತಿಸಿಕೊಂಡಿರುವುದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಜನರಿಗೆ ಶಕ್ತಿ ತುಂಬಿದೆ. ಕ್ಷೇತ್ರದಾದ್ಯಂತ ಜನಬೆಂಬಲ ವ್ಯಕ್ತವಾಗುತ್ತಿದ್ದು, ಜನರ ಮಧ್ಯೆ ಇದ್ದು ಸೇವೆ ಮಾಡುವ ಸಂಕಲ್ಪ ಹೊಂದಿದ್ದೇನೆ. ವೀರೇಶ ಮಡ್ಲೂರ