Advertisement

ಕೆಜಿಎಫ್ 2 ಚಿತ್ರ ಪ್ರದರ್ಶನದ ವೇಳೆ ಗುಂಡಿನ ದಾಳಿ : ವ್ಯಕ್ತಿ ಗಂಭೀರ, ಪೊಲೀಸರಿಂದ ಪರಿಶೀಲನೆ

12:09 AM Apr 20, 2022 | Team Udayavani |

ಹಾವೇರಿ: ಕೆಜಿಎಫ್ 2 ಚಿತ್ರ ಪ್ರದರ್ಶನದ ವೇಳೆ ವ್ಯಕ್ತಿಯೋರ್ವನ ಮೇಲೆ ಗುಂಡು ಹಾರಿಸಿದ ಘಟನೆ ಶಿಗ್ಗಾವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ ನಡೆದಿದೆ.

Advertisement

ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಶಿವಪುರ ಎಂಬ ಯುವಕನಿಗೆ ಹೊಟ್ಟೆಯ ಭಾಗಕ್ಕೆ ಗುಂಡು ತಗುಲಿದೆ. ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಘಟನೆ ನಡೆದಿದ್ದು, ಗಾಯಾಳುವಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಚಿತ್ರಮಂದಿರದಲ್ಲಿ ಗುಂಡು ಹಾರಿರುವುದನ್ನು ಎಸ್ಪಿ ಹನುಮಂತರಾಯ ಖಚಿತ ಪಡಿಸಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.

ಇದನ್ನೂ ಓದಿ : ಏಷ್ಯನ್‌ ಚಾಂಪಿಯನ್‌ಶಿಪ್‌ ಕುಸ್ತಿ: ಮೂರು ಕಂಚಿನ ಪದಕ ಗೆದ್ದ ಭಾರತ

Advertisement

Udayavani is now on Telegram. Click here to join our channel and stay updated with the latest news.

Next