Advertisement

ಉದ್ಯೋಗ ಖಾತ್ರಿ ಅನುಷ್ಠಾನದಲ್ಲಿ ಹಾವೇರಿ ಜಿಲ್ಲೆಗೆ ಐದನೇ ಸ್ಥಾನ

03:58 PM May 05, 2020 | Suhan S |

ಹಾವೇರಿ: ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಜಿಲ್ಲೆ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿದೆ. ಏಪ್ರಿಲ್‌ ಅಂತ್ಯಕ್ಕೆ 1,34,588 ಮಾನವ ದಿನಗಳನ್ನು ಸೃಜಿಸಿ ಜನರಿಗೆ ಉದ್ಯೋಗ ನೀಡಲಾಗಿದೆ ಎಂದು ಜಿಪಂ ಸಿಇಒ ರಮೇಶ ದೇಸಾಯಿ ತಿಳಿಸಿದ್ದಾರೆ.

Advertisement

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿ ಎಲ್ಲ ಗ್ರಾಪಂಗಳಲ್ಲಿ ಕನಿಷ್ಠ 100 ಜನರಿಗೆ ಉದ್ಯೋಗ ಖಾತ್ರಿಯಡಿ ಕೆಲಸ ನೀಡಲು ಸೂಚಿಸಲಾಗಿದೆ. ಬೇಡಿಕೆ ಸಲ್ಲಿಸಿದ ಎಲ್ಲರಿಗೂ ಕೆಲಸ ನೀಡಲಾಗಿದೆ ಎಂದರು. ಕೂಲಿ ದರ 275 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಜಲಮೂಲ ರಕ್ಷಣೆಗೆ ಆದ್ಯತೆ: ಜಲ ಮೂಲಗಳ ರಕ್ಷಣೆ, ಪ್ರಾಕೃತಿಕ ಸಂಪನ್ಮೂಲಗಳ ರಕ್ಷಣೆಗೆ ಆದ್ಯತೆ ನೀಡಿ ಉದ್ಯೋಗ ಖಾತ್ರಿಯಡಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಖಾಸಗಿ ಜಮೀನಿನಲ್ಲೂ ಕಾಮಗಾರಿ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗ್ರಾಮಕ್ಕೆ 20 ಎಕರೆ ಬದು ನಿರ್ಮಾಣ, ಕನಿಷ್ಠ 10ಎಕರೆ ಕೃಷಿ ಹೊಂಡ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿದೆ. ಈಗಾಗಲೇ 551 ರೈತರ ಹೊಲಗಳಲ್ಲಿ ಕ್ಷೇತ್ರ ಬದುನಿರ್ಮಾಣ ಕಾಮಗಾರಿ, 200 ನೀರು ಸಂರಕ್ಷಣಾ ಕಾಮಗಾರಿ, 150 ಕೆರೆ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿದೆ. ಈ ವರ್ಷ ಗೋಕಟ್ಟೆ, ಕಲ್ಯಾಣ ಪುನಶ್ಚೇತನಗಳ 618 ಕಾಮಗಾರಿಗಳನ್ನು ಗುರುತಿಸಿ ಜಿಯೋದತ್ತಾಂಶ ಸ್ಪೇಷಿಯಲ್‌ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next