Advertisement

ಹಾವೇರಿ: ಲಾರಿ ಪಲ್ಟಿಯಾಗಿ ಮೂವರು ದಾರುಣ ಸಾವು

05:01 PM Jan 24, 2022 | Team Udayavani |

ಹಾವೇರಿ: ಮೆಕ್ಕೆಜೋಳ ತುಂಬಿದ ಲಾರಿ ಪಲ್ಟಿಯಾಗಿ ಲಾರಿಯಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ದಾರುಬಾವಾಗಿ ಸಾವನ್ನಪ್ಪಿದ ಭೀಕರ ಅವಘಡ ಸೋಮವಾರ ನಡೆದಿದೆ.

Advertisement

ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿ ಘಟನೆ ನಡೆದಿದ್ದು,ಜೆಸಿಬಿ ಮೂಲಕ ಲಾರಿಯನ್ನು ಎತ್ತಿ ಮೃತದೇಹ ಹೊರ ತೆಗೆಯಲಾಗಿದೆ.
ಮೃತ ದುರ್ದೈವಿಗಳು ಆನಂದ (35) ಮಂಜು(37) ಮತ್ತು ಆನಂದ(33) ಎಂದು ತಿಳಿದು ಬಂದಿದೆ.

ಇಚ್ಚಂಗಿ ಗ್ರಾಮದಿಂದ ಹೊಸರಿತ್ತಿ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next