Advertisement

ಆರುತಿದೆ ಕುಂಬಾರರ ಹಣತೆ!

05:05 PM Nov 03, 2018 | |

ಹಾವೇರಿ: ದೀಪಗಳ ಹಬ್ಬ ದೀಪಾವಳಿಯಲ್ಲಿ ಹಣತೆಗೆ ಹೆಚ್ಚಿನ ಬೇಡಿಕೆ. ಆದರೆ, ಆಧುನಿಕತೆಯ ಬಿರುಗಾಳಿಗೆ ಸಿಲುಕಿ ಕುಂಬಾರರ ಮಣ್ಣಿನ ಹಣತೆ ಆರುತ್ತಿದ್ದು, ಕುಂಬಾರರ ಬದುಕು ಅಕ್ಷರಶಃ ಕತ್ತಲಾಗುತ್ತಿದೆ. ಜೇಡಿ ಮಣ್ಣಿನಿಂದ ರಚಿತ ಹಣತೆಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಕಡಿಮೆಯಾಗಿರುವುದರಿಂದ ಕುಂಬಾರ ಜೀವನ ಅಂಧಕಾರದಲ್ಲಿ ಮುಳುಗುತ್ತಿದೆ.ದೂರದ ಸ್ಥಳಗಳಿಂದ ಜೇಡಿ ಮಣ್ಣು ತಂದು ಹದ ಮಾಡಿ ತಮ್ಮ ಕೈಚಳಕದಿಂದ ವಿವಿಧ ವಿನ್ಯಾಸದ ಹಣತೆಗಳನ್ನು ರಚಿಸಿ, ಸುಟ್ಟು ಮಾರುಕಟ್ಟೆಗೆ ತಂದು 10ರಿಂದ 15 ರೂ.ಗಳಿಗೆ ಡಜನ್‌ (ಹಣತೆ) ಎಂದರೂ ಗ್ರಾಹಕರು ಖರೀದಿಸದ ಪರಿಸ್ಥಿತಿ ಬಂದಿರುವುದು ದುರದೃಷ್ಟಕರ ಸಂಗತಿ.

Advertisement

ಇದಕ್ಕೆ ಕುಂಬಾರರ ಈ ಗೋಳಿಗೆ ಕಾರಣ ಚೀನಿ ಮಣ್ಣಿನ(ಯಂತ್ರದಿಂದ ತಯಾರಿಸಿದ) ಹಣತೆಗಳು. ಹೊಳಪಿನ ಮೈಮಾಟವುಳ್ಳ, ವೈವಿಧ್ಯಮಯ ಕಲಾ ಚಿತ್ತಾರ ಹೊಂದಿರುವ ಈ ಹಣತೆಗಳಿಗೆ ಬಹುತೇಕ ಜನರು ಮಾರುಹೋಗಿರುವುದಿದೇ ಕಾರಣ. ಕೇವಲ ಒಂದು ದಶಕದ ಲಕ್ಷ ಲಕ್ಷ ಹಣತೆಗಳನ್ನು ತಮ್ಮ ಮನೆ ಮುಂದೆ ಮಾರಾಟ ಮಾಡುತ್ತಿದ್ದ ಕುಂಬಾರ ಕುಟುಂಬಗಳು ಐದಾರು ವರ್ಷಗಳಿಂದ ಸಾವಿರ ಲೆಕ್ಕದಲ್ಲಿ ಹಣತಿಗಳನ್ನು ಮಾರಾಟ ಮಾಡಿ ತಮ್ಮ ಬದುಕಿನ ಬಂಡಿ ಸಾಗಿಸುತ್ತಿದ್ದಾರೆ. ಹಣತೆ ತಯಾರಿಸಿಯಯೇ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದವರು ಈಗ ಬೇರೆ ವೃತ್ತಿಯತ್ತ ಮುಖ ಮಾಡಿದ್ದಾರೆ. ಒಟ್ಟಾರೆ ಕುಂಬಾರರ ಹಣತೆ ಈಗ ಎಲ್ಲರಿಂದ ಕಡೆಗಣನೆಗೊಳಾಗುತ್ತಿರುವುದು ಖೇದಕರ ಸಂಗತಿ.

ಬೂದಿ ಕಕ್ಕುವಂತಾದ ಜೀವನ
ಹಲವಾರು ವರ್ಷಗಳಿಂದ ಕಂಬಾರಿಕೆ ವೃತ್ತಿ ಮಾಡುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪಿಂಗಾಣಿ ಹಾವಳಿಯಿಂದಾಗಿ ಮಣ್ಣಿನ ಹಣತೆ ಬೆಲೆ ಇಲ್ಲದಾಗಿದೆ. ಸರ್ಕಾರ ತಮಗೆ ಪ್ರೋತ್ಸಾಹ ನೀಡುವ ಯಾವುದೇ ಯೋಜನೆಯನ್ನೂ ರೂಪಿಸಿಲ್ಲ. ಇದರಿಂದಾಗಿ ಕುಂಬಾರರ ಜೀವನ ಬೂದಿ ತಿಂದು ಬೂದಿ ಕಕ್ಕುವಂತಾಗಿದೆ ಎನ್ನುತ್ತಾರೆ ಪ್ರೇಮವ್ವ ಕುಂಬಾರ.

„ಎಚ್‌.ಕೆ. ನಟರಾಜ

Advertisement

Udayavani is now on Telegram. Click here to join our channel and stay updated with the latest news.

Next