Advertisement

Haveri; ಪಕ್ಷ ಸೂಚಿಸಿದರೆ ಲೋಕಸಭೆ ಸ್ಪರ್ಧೆಗೆ ಸಿದ್ದ: ಬಿ.ಸಿ.ಪಾಟೀಲ್

02:47 PM Jan 29, 2024 | Team Udayavani |

ಹಾವೇರಿ: ಲೋಕಸಭೆ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಎಲ್ಲಾ ಊಹಾಪೋಹಗಳಿಗೆ ತರೆ ಎಳೆದು ಹೈಕಮಾಂಡ್ ಸೂಕ್ತ ಅಭ್ಯರ್ಥಿ ಯಾರು ಎನ್ನುವುದನ್ನು ತೀರ್ಮಾನ ಮಾಡುತ್ತದೆ. ಅವರು ತೀರ್ಮಾನಿಸಿದ ವ್ಯಕ್ತಿಯ ಪರವಾಗಿ ನಾವು ಕೆಲಸ ಮಾಡುತ್ತೇವೆ. ಒಟ್ಟಾಗಿ ಹಾವೇರಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಏನಾದರು ನೀನು ನಿಲ್ಲಪ್ಪ ಎಂದು ಹೇಳಿದರೆ ನಾನು ಸ್ಪರ್ಧೆ ಮಾಡಲು ಸಿದ್ಧನಿದ್ದೇನೆ. ಈಗಾಗಲೇ ಹೈಕಮಾಂಡ್ ನವರು ಸರ್ವೆ ರಿಪೋರ್ಟ್ ನೋಡಿ ನಿರ್ಧಾರ ತೆಗೆದುಕೊಳ್ಳುವುದಾಗಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ ಎಂದರು.

ಇದನ್ನೂ ಓದಿ:Viral: ಒಂಟಿತನ ಹೋಗಲಾಡಿಸಲು 103ರ ಹರೆಯದಲ್ಲಿ 49ರ ಮಹಿಳೆಯ ಜೊತೆ ಮೂರನೇ ಮದುವೆಯಾದ ವೃದ್ಧ.!

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶೆಟ್ಟರ್ ಮರಳಿ ಮನೆಗೆ ಬಂದಿದ್ದಾರೆ. ರಾಹುಕಾಲ, ಗುಳಿಗಕಾಲ ಎಂದಿರುತ್ತದಲ್ಲ, ಹಾಗೆ ಕಾಲ ಕೆಟ್ಟಿದ್ದರಿಂದ ಅದೇನೋ ಆಯ್ತು. ಅವರಿಗೂ ಕೂಡಾ ಅನ್ಯಾಯವಾಗಿತ್ತು. ಇವತ್ತು ಆ ಅನ್ಯಾಯವನ್ನು ಸರಿ ಮಾಡುತ್ತೆವೆ ಎಂದು ಮರಳಿ ಪಕ್ಷಕ್ಕೆ ಕರೆ ತಂದಿದ್ದಾರೆ. ಅವರು ಹಿರಿಯರು ಅವರು ಮರಳಿ ನಮ್ಮ ಪಕ್ಷಕ್ಕೆ ಬಂದಿದ್ದು ಒಂದು ದೊಡ್ಡ ಶಕ್ತಿ ಬಂದತಾಗಿದೆ ಎಂದು ಬಿ.ಸಿ ಪಾಟೀಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next