Advertisement

Haveri; ಶಾಲಾ ಪ್ರವಾಸದ ಬಸ್ ಪಲ್ಟಿ, ನಾಲ್ಕು ಮಕ್ಕಳಿಗೆ ಗಂಭೀರ ಗಾಯ

10:27 AM Dec 26, 2023 | Team Udayavani |

ಹಾವೇರಿ: ಪ್ರವಾಸಕ್ಕೆ ಹೊರಟ್ಟಿದ್ದ ಶಾಲಾ ಮಕ್ಕಳಿದ್ದ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ಸವಣೂರು ತಾಲ್ಲೂಕಿನ ಅಲ್ಲಿಪುರ ಕ್ರಾಸ್ ಬಳಿ ನಡೆದಿದೆ.

Advertisement

ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸಕ್ಕೆ ಆಗಮಿಸಿದ್ದ ವೇಳೆ ದುರ್ಘಟನೆ ನಡೆದಿದೆ.

ಗಂಭೀರ ಗಾಯಗೊಂಡ ನಾಲ್ವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ:Mutton Shanks; ಮೆನುವಿನಲ್ಲಿ ಮಟನ್ ಮೂಳೆ ಇಲ್ಲವೆಂದು ಮದುವೆ ರದ್ದು ಮಾಡಿದ ವರನ ಕಡೆಯವರು!

ಸಣ್ಣಪುಟ್ಟ ಗಾಯಗೊಂಡ ಮಕ್ಕಳನ್ನು ಸವಣೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಸ್ಥಳಕ್ಕೆ ಸವಣೂರು ಉಪವಿಭಾಗಧಿಕಾರಿ, ತಹಶೀಲ್ದಾರ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸವಣೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next