Advertisement

ಓಲೇಕಾರಗೆ ಹಾವೇರಿ ಟಿಕೆಟ್‌: ಮೂವರ ಆತ್ಮಹತ್ಯೆ ಯತ್ನ

06:30 AM Apr 21, 2018 | Team Udayavani |

ಹಾವೇರಿ: ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ ಅವರಿಗೆ ಟಿಕೆಟ್‌ ಘೋಷಿಸಿದ್ದರಿಂದ ಅಸಮಾಧಾನಗೊಂಡ ಮೂವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಸಂಜೆ ನಗರದಲ್ಲಿ ನಡೆದಿದೆ.

Advertisement

ರಾಜು ಹರಿಜನ, ನಿಂಗಪ್ಪ ಕಡೂರು, ಯಲ್ಲಪ್ಪ ಎಂಬುವರು ಸೀಮೆಎಣ್ಣೆ ಸುರಿದುಕೊಂಡು ಆತ್ಯಹತ್ಯೆಗೆ ಯತ್ನಿಸಿದರು. ತಕ್ಷಣ
ಸ್ಥಳದಲ್ಲಿದ್ದವರು, ಪೊಲೀಸರು ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದರು. ಬಿಜೆಪಿಯ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆಯಾಗುತ್ತಲೇ ಕೆಲವರು ಆಕ್ರೋಶ ವ್ಯಕ್ತಪಡಿಸಿ ನಗರದ ಸಿದ್ದಪ್ಪ ವೃತ್ತದಲ್ಲಿ ಸೇರಿ ಬಿಜೆಪಿ ವರಿಷ್ಠರ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮೂವರು ಹಠಾತ್‌ ಆಗಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಪ್ರತಿಭಟನೆಗೆ ಮುಂದಾದರು. ಆಗ ಪೊಲೀಸರು, ಜನರು ಅವರನ್ನು ಹಿಡಿದು ಜಿಲ್ಲಾಸ್ಪತ್ರೆಗೆ ಕರೆದೊಯ್ದರು.ಬಳಿಕ ಕಾರ್ಯಕರ್ತರು ಸಿದ್ದಪ್ಪ ವೃತ್ತದಲ್ಲಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next