Advertisement

ವೆಲ್ಲೂರಿನಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 10 ಕೋಟಿ ರೂ. ಹವಾಲಾ ಹಣ ವಶ

06:01 PM Sep 30, 2022 | Team Udayavani |

ವೆಲ್ಲೂರು (ತಮಿಳುನಾಡು) : ಇಲ್ಲಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 10 ಕೋಟಿ ರೂ. ಹವಾಲಾ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದು, ನಾಲ್ವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Advertisement

ವೆಲ್ಲೂರು ಜಿಲ್ಲೆಯ ಪಲ್ಲಿಕೊಂಡ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ಗಳು ಗುರುವಾರ ರಾತ್ರಿ ಗಸ್ತು ತಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪ್ರದೇಶದಲ್ಲಿ ಜನರು ಕಾರಿನಿಂದ ಟ್ರಕ್‌ಗೆ ಬಂಡಲ್ ಗಳನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ನೋಡಿ ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದರು. ಆದರೆ, ನಾಲ್ವರು ವ್ಯತಿರಿಕ್ತ ಹೇಳಿಕೆ ನೀಡಿದಾಗ ಬಂಡಲ್ ತೆರೆದು ನೋಡಿದಾಗ ಅದರಲ್ಲಿ ಹಣ ಇರುವುದು ಪತ್ತೆಯಾಗಿದೆ. ಅವರ ಬಳಿ ಇದ್ದ ಹಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳಿಲ್ಲದ ಕಾರಣ, ಅಧಿಕಾರಿಗಳು ಕಾರು ಮತ್ತು ಟ್ರಕ್ ಅನ್ನು ವಶಪಡಿಸಿಕೊಂಡರು. ಅದರಲ್ಲಿ ಸುಮಾರು 10 ಕೋಟಿ ರೂ.ಹಣ ಪತ್ತೆಯಾಗಿದೆ.

ಇದನ್ನೂ ಓದಿ : ಕೋವಿಡ್ ನಂತರ ಬಲಿಷ್ಠ ಭಾರತ ನಿರ್ಮಾಣವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಶಕ್ಕೆ ಪಡೆದಿರುವ ನಾಲ್ವರು ಹಣವನ್ನು ಕೇರಳಕ್ಕೆ ಸಾಗಿಸಲು ಯತ್ನಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ನಾಲ್ವರನ್ನು ಬಂಧಿಸಲಾಗಿದ್ದು, ಅವರನ್ನು ಚೆನ್ನೈನ ಬ್ರಾಡ್‌ವೇ ಪ್ರದೇಶದ ಎಂ.ನಿಸಾರ್ ಅಹ್ಮದ್ (33), ಮಧುರೈನ ವಸೀಮ್ ಅಕ್ರಂ (19), ಕೇರಳದ ಕೋಝಿಕೋಡ್ ಪ್ರದೇಶದ ಎಂ.ಸರ್ಬುದ್ದೀನ್ (37) ಮತ್ತು ನಾಸರ್ (42) ಎಂದು ಗುರುತಿಸಲಾಗಿದೆ.

ವೆಲ್ಲೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕಣ್ಣನ್ ತನಿಖೆಯ ನೇತೃತ್ವ ವಹಿಸಿದ್ದಾರೆ. 10 ಕೋಟಿ ರೂ. ಜಪ್ತಿ ಮಾಡಿರುವ ಬಗ್ಗೆ ವೆಲ್ಲೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿ ನಗದನ್ನು ಹಸ್ತಾಂತರಿಸಲಾಗುವುದು ಎಂದು ಹೇಳಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next