Advertisement

ಹಜರತ್‌ ಲಾಡ್ಲೆ ಮಶಾಕ್‌ ಉರುಸಿಗೆ ಭರದ ಸಿದ್ಧತೆ

11:12 AM Nov 12, 2021 | Team Udayavani |

ಆಳಂದ: ಈ ಭಾಗದ ಪ್ರಸಿದ್ಧ ಸೂಫಿ-ಸಂತ ಹಜರತ್‌ ಲಾಡ್ಲೆ ಮಶಾಕರ ನ.15ರಿಂದ ಎರಡು ದಿನಗಳ ಕಾಲ ನಡೆಯಲಿರುವ 666ನೇ ಉರುಸ್‌ ನ ಭರದ ಸಿದ್ಧತೆ ನಡೆದಿದೆ ಎಂದು ದರ್ಗಾ ಕಮಿಟಿಯ ಅಧ್ಯಕ್ಷರಾದ ಆಸೀಫ್‌ ಅನ್ಸಾರಿ ಕಾರಬಾರಿ, ಮೋಹಿಜ್‌ ಕಾರಬಾರಿ ಅವರು ಜಂಟಿಯಾಗಿ ತಿಳಿಸಿದ್ದಾರೆ.

Advertisement

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉರುಸ್‌ ನಿಮಿತ್ತ ಈಗಾಗಲೇ ದರ್ಗಾ ಮತ್ತು ಆವರಣ ಗೋಡೆ ಸುಣ್ಣ, ಬಣ್ಣದಿಂದ ಕಂಗೊಳಸುತ್ತಿದ್ದು ಹಾಗೂ ಚಾರಮಿನಾರಗೆ ಅಲಂಕೃತ ವಿದ್ಯುತ್‌ ದೀಪಾಲಂಕರ ಕೈಗೊಂಡಿದ್ದು ನೋಡುಗರನ್ನು ಆಕರ್ಷಿಸುತ್ತಿದೆ.

ಬರುವ ನ.15ರಂದು ಗಂಧೋತ್ಸವ ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ ಹೊರಟು ಪ್ರಮುಖ ರಸ್ತೆಗಳ ಮೂಲಕ ಬೆಳಗಿನ ಜಾವ ಲಾಡ್ಲೆ ಮಶಾಕರ ದರ್ಗಾಕ್ಕೆ ತಲುಪಲಿದೆ. ನ.16ರಂದು ದೀಪೋತ್ಸವ ಮಧ್ಯಾಹ್ನ ಖವಾಲಿ ಕಾರ್ಯಕ್ರಮ ಜರುಗಲಿದೆ. ಉರುಸ್‌ ನಿಮಿತ್ತ ಈಗಾಗಲೇ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ದೂರದಿಂದ ಬರುವ ಭಕ್ತಾದಿಗಳಿಗೆ ವಸತಿ ವ್ಯವಸ್ಥೆ ಕೈಗೊಳ್ಳಲಾಗಿದೆ. ಉರುಸ್‌ ಅಂಗವಾಗಿ ಈಗಾಗಲೇ ಅಂಗಡಿ, ಮುಗ್ಗಟುಗಳು ತೆರೆದುಕೊಂಡಿವೆ ದರ್ಗಾಕ್ಕೆ ಬರುವ ಭಕ್ತಾದಿಗಳು ಶಾಂತತೆ ಮತ್ತು ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಉರುಸ್‌ನಲ್ಲಿ ಹೈದರಾಬಾದ, ಮುಂಬೈ, ದೆಹಲಿ, ಪುಣೆ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಎರಡು ದಿನಗಳ ಕಾಲ ದರ್ಗಾದಲ್ಲಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಗಳಲ್ಲಿ ಸಾಹಿತಿಗಳು ಮತ್ತು ಧಾರ್ಮಿಕ ಮುಖಂಡರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಕಮೀಟಿ ಕಾರ್ಯದರ್ಶಿ ಕಲೀಲ ಅನ್ಸಾರಿ, ಸೈಫಾನ್‌ ಮೂಲಕ ಅನ್ಸಾರಿ, ರಮ್ಮು ಅನ್ಸಾರಿ, ಆರೀಫ್‌ ಅನ್ಸಾರಿ, ಮುಕ್ಸುದ್‌ ಅನ್ಸಾರಿ, ಮುಕದುಮ ಅನ್ಸಾರಿ, ಇಪ್ತೆಕಾರ ಅನ್ಸಾರಿ, ಇಸೂಫ್‌ ಕಾರಬಾರಿ ಮತ್ತಿತರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next