Advertisement

ಜಂತಕಲ್ ಕೇಸ್; ಜೂ.20ರವರೆಗೆ ಎಚ್ ಡಿಕೆ ಬಂಧಿಸ್ಬೇಡಿ; SITಗೆ ಹೈಕೋರ್ಟ್

12:14 PM Jun 15, 2017 | Team Udayavani |

ಬೆಂಗಳೂರು: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಏಕಸದಸ್ಯಪೀಠ ತಾತ್ಕಾಲಿಕ ರಿಲೀಫ್ ನೀಡಿದ್ದು, ಜೂನ್ 20ರವರೆಗೆ ಎಚ್ ಡಿಕೆ ಅವರನ್ನು ಬಂಧಿಸದಂತೆ ಎಸ್ ಐಟಿಗೆ ಗುರುವಾರ ಸೂಚನೆ ನೀಡಿದೆ.

Advertisement

ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾ.ರತ್ನಕಲಾ ಅವರು, ಜೂನ್ 19ರವರೆಗೆ ಕುಮಾರಸ್ವಾಮಿ ಅವರನ್ನು ಬಂಧಿಸದಂತೆ ಎಸ್ಐಟಿಗೆ ಆದೇಶ ನೀಡಿ, ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜಂತಕಲ್ ಮೈನಿಂಗ್ ಗುತ್ತಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಎಸ್ಐಟಿ ವಿಶೇಷ ನ್ಯಾಯಾಲಯ ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅಲ್ಲದೇ 150 ಕೋಟಿ ರೂ. ಗಣಿ ಲಂಚ ಸ್ವೀಕರಿಸಿರುವುದಾಗಿ ಆರೋಪಿಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಎಸ್ಐಟಿಗೆ ಸಾಕ್ಷ್ಯಾಧಾರಗಳನ್ನು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next