Advertisement

Masood case: ಮತ್ತೆ ಇಬ್ಬರಿಗೆ ಜಾಮೀನು

10:05 PM Nov 03, 2023 | Team Udayavani |

ಸುಳ್ಯ: ಕಳಂಜದಲ್ಲಿ ಕಳೆದ ವರ್ಷದ ಜುಲೈನಲ್ಲಿ ನಡೆದಿದ್ದ ಮಸೂದ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರುಗೊಂಡಿದೆ.

Advertisement

ಆರೋಪಿಗಳಾದ ಅಭಿಲಾಷ್‌ ಮತ್ತು ಸುನಿಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ವಿಶ್ವಜಿತ್‌ ಎಸ್‌. ಶೆಟ್ಟಿ ಜಾಮೀನು ಮಂಜೂರು ಮಾಡಿದ್ದಾರೆ.

ಆರೋಪಿಗಳ ಪರ ಹಿರಿಯ ವಕೀಲ ಅರುಣ್‌ ಶ್ಯಾಮ್‌ ವಾದಿಸಿದ್ದಾರೆ. ವಕೀಲರಾದ ಸುಯೋಗ್‌ ಹೇರಳೆ, ನಿಶಾಂತ್‌ ಕುಶಾಲಪ್ಪ ವಕಾಲತ್ತು ವಹಿಸಿದ್ದರು. ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಆರು ಜನ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು. ಈ ಮೂಲಕ ಪ್ರಕರಣದ ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರುಗೊಂಡಂತಾಗಿದೆ.

ಪ್ರಕರಣದ ಹಿನ್ನೆಲೆ
ಕಳಂಜದಲ್ಲಿ 2022ರ ಜುಲೈ 19ರ ಸಂಜೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿತ್ತು. ಬಳಿಕ ರಾತ್ರಿ ಮಾತುಕತೆ ನೆಪದಲ್ಲಿ ಎಂಟು ಜನರ ಗುಂಪು ಮಸೂದ್‌ಗೆ ಹಲ್ಲೆ ನಡೆಸಿದ್ದರು ಹಾಗೂ ಓರ್ವ ಮಸೂದ್‌ ತಲೆಗೆ ಬಾಟಲಿಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಸೂದ್‌ ಜು. 21ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಸುನಿಲ್ ಸುಧೀರ್‌, ಶಿವ, ಸದಾಶಿವ, ರಂಜಿತ್‌, ಅಭಿಲಾಷ್‌, ಜಿಮ್‌ ರಂಜಿತ್‌, ಭಾಸ್ಕರ ಅವರನ್ನು ಬಂಧಿಸಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next