Advertisement

ಸಿದ್ದರಾಮಯ್ಯ ಸೇರಿ 24 ಮಂದಿಗೆ ಹೈಕೋರ್ಟ್‌ ನೋಟಿಸ್‌

12:51 AM Aug 21, 2019 | Team Udayavani |

ಬೆಂಗಳೂರು: ಪೊಲೀಸ್‌ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸು ಮಾಡಿ ಸುಪ್ರೀಂಕೋರ್ಟ್‌ ತೀರ್ಪು ಉಲ್ಲಂಘಿಸಿರುವ ಜನಪ್ರತಿನಿಧಿಗಳ ವಿರುದ್ಧ ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಸೇರಿ 24 ಮಂದಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಹಿಂದಿನ ಸರ್ಕಾರದಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಸೇರಿ 26 ಮಂದಿ ಜನಪ್ರತಿನಿಧಿಗಳು ಪೊಲೀಸ್‌ ಅಧಿಕಾರಿಗಳ ವರ್ಗಾವಣೆಗೆ ನಿಯಮಬಾಹಿರಾಗಿ ಶಿಫಾರಸು ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಲು ಆದೇಶಿಸಬೇಕೆಂದು ಕೋರಿ ಪೊಲೀಸ್‌ ಮಹಾಸಂಘದ ಅಧ್ಯಕ್ಷ ಶಶಿಧರ್‌ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ ಮುಖ್ಯನ್ಯಾಯಮೂರ್ತಿ ಎ.ಎಸ್‌.ಓಕ್‌ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯ ಪ್ರತಿವಾದಿಗಳಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಚಿವ ರೋಷನ್‌ ಬೇಗ್‌ ಸೇರಿದಂತೆ 24 ಮಂದಿಗೆ ನೋಟಿಸ್‌ ಜಾರಿಗೊಳಿಸಿ ಸೆ.24ಕ್ಕೆ ವಿಚಾರಣೆ ಮುಂದೂಡಿದೆ.

ಪ್ರತಿವಾದಿಗಳಾದ ಸಂಸದ ಡಾ. ಉಮೇಶ್‌ ಜಾಧವ್‌, ಮಾಜಿ ಶಾಸಕ ಸಂತೋಷ್‌ ಲಾಡ್‌, ಶಾಸಕರಾದ ಎಂ.ಕೃಷ್ಣಪ್ಪ, ಬಿ.ಶಿವಣ್ಣ, ಕನೀಝ್ ಫಾತಿಮಾ, ದಿನೇಶ್‌ ಗುಂಡೂರಾವ್‌, ಆರ್‌. ನರೇಂದ್ರ, ಬಿ.ನಾಗೇಂದ್ರ, ಶಾಮನೂರು ಶಿವಶಂಕರಪ್ಪ,ಎನ್‌.ಎ. ಹ್ಯಾರಿಸ್‌, ಡಾ. ಯತೀಂದ್ರ, ಬಿ.ಎಸ್‌. ಸುರೇಶ್‌, ಅನಿಲ್‌ ಚಿಕ್ಕಮಾದು, ಅಖಂಡ ಶ್ರೀನಿವಾಸ ಮೂರ್ತಿ, ಎಸ್‌.ಎನ್‌.ಸುಬ್ಟಾರೆಡ್ಡಿ, ಬಿ.ಕೆ. ಸಂಗಮೇಶ್ವರ, ಸುರೇಶ್‌ ಗೌಡ, ವಿ. ಮುನಿಯಪ್ಪ, ಮಾಜಿ ಶಾಸಕ ಕೆ.ಸುಧಾಕರ್‌ ರೆಡ್ಡಿಗೂ ನೋಟಿಸ್‌ ಜಾರಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next