Advertisement

ಚಿದಂಬರಂ ಆರೋಗ್ಯ ಉತ್ತಮವಾಗಿದೆ;ಏಮ್ಸ್ ವರದಿ, ಬೇಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

08:12 AM Nov 02, 2019 | Nagendra Trasi |

ನವದೆಹಲಿ:ಐಎನ್ ಎಕ್ಸ್ ಮೀಡಿಯಾ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರ ಆರೋಗ್ಯ ಉತ್ತಮವಾಗಿದ್ದು, ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯವಿಲ್ಲ ಎಂಬ ಏಮ್ಸ್ ವರದಿಯ ಆಧಾರದಲ್ಲಿ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನಿರಾಕರಿಸಿದ್ದು, ತಿಹಾರ್ ಜೈಲುವಾಸ ಮುಂದುವರಿಸುವಂತಾಗಿದೆ.

Advertisement

ಶುಕ್ರವಾರ ಚಿದಂಬರಂ ಅವರ ಆರೋಗ್ಯದ ಕುರಿತು ಏಮ್ಸ್ ವೈದ್ಯರು ನೀಡಿರುವ ವರದಿಯನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ್ದರು. ಚಿದಂಬರಂ ಅವರು ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯವಿಲ್ಲ, ಅವರ ಆರೋಗ್ಯ ಉತ್ತಮವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಏಮ್ಸ್ ವೈದ್ಯರ ವರದಿಯ ನಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಚಿದಂಬರಂಗೆ ಶುಚಿತ್ವದ ಕೋಣೆ, ಮಿನರಲ್ ನೀರು, ಮನೆ ಅಡುಗೆ ಹಾಗೂ ಸೊಳ್ಳೆಯಿಂದ ರಕ್ಷಣೆ ನೀಡುವ ವ್ಯವಸ್ಥೆ ಮಾಡುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

ಕೇಂದ್ರದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರ ಆರೋಗ್ಯದ ಬಗ್ಗೆ ಆರೋಗ್ಯ ಮಂಡಳಿ ಅಭಿಪ್ರಾಯ ನೀಡುವಂತೆ ಏಮ್ಸ್ ನಿರ್ದೇಶಕರಿಗೆ ದೆಹಲಿ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next