Advertisement

ಸಕ್ಸೇನಾ ವಿರುದ್ಧ ಸುಳ್ಳು ಆರೋಪಗಳಿಗೆ ದೆಹಲಿ ಹೈಕೋರ್ಟ್‌ ತಡೆ

10:34 PM Sep 27, 2022 | Team Udayavani |

ನವದೆಹಲಿ: ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡದಂತೆ ಆಮ್‌ ಆದ್ಮಿ ಪಕ್ಷ ಮತ್ತು ಅದರ ನಾಯಕರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ.

Advertisement

ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸಕ್ಷೇನಾ ಅವರ ವಿರುದ್ಧ ಹಾಕಿರುವ ಮಾನಹಾನಿಕಾರಕ ಪೋಸ್ಟ್‌ಗಳು, ವಿಡಿಯೋಗಳು ಮತ್ತು ಟ್ವೀಟ್‌ಗಳನ್ನು ತೆಗೆದುಹಾಕುವಂತೆ ಹೈಕೋರ್ಟ್‌ ನಿರ್ದೇಶಿಸಿದೆ. ಇದು ಆಪ್‌ ವಿರುದ್ಧ ಸಕ್ಸೇನಾ ಅವರ ದೊಡ್ಡ ಗೆಲುವು ಎಂದು ವಿಶ್ಲೇಷಿಸಲಾಗಿದೆ.

ಹೈಕೋರ್ಟ್‌ ಆದೇಶದ ಕುರಿತು ಸಕ್ಸೇನಾ, “ಸತ್ಯ ಮೇವ ಜಯತೆ’ ಎಂದು ಟ್ವೀಟ್‌ ಮಾಡಿದ್ದಾರೆ. ಸಕ್ಸೇನಾ ಅವರು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 1,400 ಕೋಟಿ ರೂ. ಹಗರಣದಲ್ಲಿ ಭಾಗಿಯಾಗಿದ್ದರು ಹಾಗೂ ಅಮಾನ್ಯ ನೋಟುಗಳ ವರ್ಗಾವಣೆ ಸೇರಿದಂತೆ ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂದು ಆಪ್‌ ನಾಯಕರು ಆರೋಪ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next