Advertisement

ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್‌ ಅಸ್ತು

11:31 PM Mar 08, 2022 | Team Udayavani |

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲಿನಲ್ಲಿರುವ 19 ವರ್ಷದ ಬಿ.ಕಾಂ. ಪದವಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್‌ ಷರತ್ತುಬದ್ಧ ಅನುಮತಿ ನೀಡಿದೆ.

Advertisement

ಪರೀಕ್ಷೆ ಬರೆಯುವುದಕ್ಕಾಗಿ ಜಾಮೀನು ನೀಡುವಂತೆ ಕೋರಿ ಆರೋಪಿ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ವಿ. ಶ್ರೀಷಾನಂದ ಅವರ ಏಕಸದಸ್ಯ ನ್ಯಾಯಪೀಠ, ಇದೇ 15ರಿಂದ ಆರಂಭವಾಗಲಿರುವ ಮೂರನೇ ಸೆಮಿಸ್ಟರ್‌ ಪರೀಕ್ಷೆ ಬರೆಯಲು ಷರತ್ತಿನೊಂದಿಗೆ ಅನುಮತಿಸಿ ಅರ್ಜಿಯನ್ನು ಇತ್ಯರ್ಥ ಪಡಿಸಿತು. ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next