Advertisement

ಎಚ್‌.ಡಿ.ದೇವೇಗೌಡರನ್ನು ಸಿದ್ದುವೇ ಸೋಲಿಸಲಿದ್ದಾರೆ

05:07 PM Apr 01, 2019 | Team Udayavani |

ಹುಬ್ಬಳ್ಳಿ/ಗಂಗಾವತಿ: ಸಿದ್ದರಾಮಯ್ಯ ನವರು ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಸೋಲಿಸುವ ಮೂಲಕ ಚಾಮುಂಡೇಶ್ವರಿ ಸೋಲಿನ ಸೇಡನ್ನು ತೀರಿಸಿಕೊಳ್ಳಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

Advertisement

ಸುದ್ದಿಗಾರರ ಜೊತೆ ಮಾತನಾಡಿ, ಕುರುಬರು ಸುಳ್ಳು ಹೇಳಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ ಸುಳ್ಳು ಹೇಳುವುದರಲ್ಲಿ ಖ್ಯಾತಿ ಗಳಿಸಿದ್ದಾರೆ. ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳನ್ನು ಸಿದ್ದರಾಮ ಯ್ಯ ಹಾಗೂ ಅವರ ತಂಡ ಸೋಲಿಸಲಿದೆ. ಕೊರಟಗೆರೆ ಯಲ್ಲಿ ಡಾ| ಜಿ.ಪರಮೇಶ್ವರ ಅವರನ್ನು ಸೋಲಿಸಲು ಸಿದ್ದರಾಮಯ್ಯ ನಡೆಸಿದ್ದ ಷಡ್ಯಂತ್ರ ಲೋಕಸಭಾ ಚುನಾವಣೆಯಲ್ಲಿ ಮರುಕಳಿಸಲಿದೆ. ರಾಜ್ಯದ 27 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು, ಮತ್ತೂಮ್ಮೆ ನರೇಂದ್ರ ಮೋದಿಯವರು ಜಗಮೆಚ್ಚಿದ ಪ್ರಧಾನಿಯಾಗಲಿದ್ದಾರೆ. ದಾವಣಗೆರೆ ಯಲ್ಲಿ ಶಾಮನೂರು ಶಿವಶಂಕರಪ್ಪ ಬೇಡ ಎಂದರೂ ಟಿಕೆಟ್‌ ಘೋಷಿಸಿದ್ದಾರೆ. ಅವರಿಗೆ ಅಭ್ಯರ್ಥಿಗಳೇ ಇಲ್ಲ ಎಂದು ವ್ಯಂಗ್ಯವಾಡಿದರು.

ಮೈಸೂರಿನಲ್ಲಿ ಸಿದ್ದರಾಮಯ್ಯ ಕರೆದ ಚುನಾವಣಾ ಸಭೆಗೆ ಸಚಿವರಾದ ಜಿ.ಟಿ.ದೇವೇ ಗೌಡ, ಸಾ.ರಾ. ಮಹೇಶ ಗೈರಾಗುತ್ತಾರೆ. ಹಾಸನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ನಾವು ಜೆಡಿಎಸ್‌ಗೆ ಮತ ಹಾಕಲ್ಲ ಎಂದು ಬಹಿರಂಗ ವಾಗಿಯೇ ಹೇಳುತ್ತಿದ್ದಾರೆ.

ಬೆಂಗಳೂರಿನ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರವೇ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಗಳು ಕಣಕ್ಕಿಳಿದಿದ್ದರೂ, ಹಲವು ಕಡೆಗಳಲ್ಲಿ ಒಂದು ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಇನ್ನೊಂದು ಪಕ್ಷದ ಕಾರ್ಯಕರ್ತರು ಮುಂದಾಗಿದ್ದು, ಇದು
ಮಹಾಘಟಬಂಧನದ ಸ್ಥಿತಿ ಎಂದು ಲೇವಡಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next