Advertisement

ರಾಷ್ಟ್ರಪತಿ ಚುನಾವಣೆ : HDK ದೆಹಲಿ ಪ್ರಯಾಣ, ಮಮತಾ ಬ್ಯಾನರ್ಜಿ ಕರೆದಿರುವ ಸಭೆಯಲ್ಲಿ ಭಾಗಿ

11:10 PM Jun 14, 2022 | Team Udayavani |

ಬೆಂಗಳೂರು : ರಾಷ್ಟ್ರಪತಿ ಚುನಾವಣೆ ಸಂಬಂಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರೆದಿರುವ ಪ್ರತಿಪಕ್ಷಗಳ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ (ಬುಧವಾರ) ಬೆಳಗ್ಗೆ ನವದೆಹಲಿಗೆ ತೆರಳುವರು.

Advertisement

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು; “ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರಿಗೆ ಹಾಗೂ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ” ಎಂದಿದ್ದಾರೆ.

ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಎಲ್ಲ ಪ್ರಾದೇಶಿಕ ಪಕ್ಷಗಳ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಯತ್ನಗಳನ್ನು ಆರಂಭಿಸಿದ್ದು, ಸುಮಾರು ಇಪ್ಪತ್ತೆರಡಕ್ಕೂ ಹೆಚ್ಚು ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ. ಆದರೆ, ಜೆಡಿಎಸ್‌ ಪಕ್ಷದಿಂದ ಇಬ್ಬರು ನಾಯಕರನ್ನು ಅವರು ವೈಯಕ್ತಿವಾಗಿ ಆಹ್ವಾನಿಸಿದ್ದಾರೆಂದು ತಿಳಿಸಿದ್ದಾರೆ.

ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಮಧ್ಯಾಹ್ನ 3 ಗಂಟೆಗೆ ಈ ಸಭೆಯನ್ನು ಕರೆಯಲಾಗಿದೆ.

ಇದನ್ನೂ ಓದಿ : ಮಲ್ಪೆ : ಹಾವು ಕಚ್ಚಿ ವ್ಯಕ್ತಿ ಸಾವು : ಮನೆಯ ಕಪಾಟಿನ ಮೇಲಿದ್ದ ಬಟ್ಟೆ ತೆಗೆಯಲು ಹೋದಾಗ ದುರಂತ

Advertisement
Advertisement

Udayavani is now on Telegram. Click here to join our channel and stay updated with the latest news.

Next