Advertisement

ಜಿಎಸ್‌ಟಿ ನಷ್ಟ ಪರಿಹಾರ ಕೇಂದ್ರದಿಂದ ಹೊಣೆಗೇಡಿ ವರ್ತನೆ: ಎಚ್‌ಡಿಕೆ

11:30 PM Aug 29, 2020 | sudhir |

ಬೆಂಗಳೂರು: ಜಿಎಸ್‌ಟಿ ನಷ್ಟ ತುಂಬಿಕೊಡುವ ಬದ್ಧತೆ ಯಿಂದ ಹಿಂದೆ ಸರಿದಿರುವ ಕೇಂದ್ರ ಸರಕಾರವು ರಾಜ್ಯಗಳ ಮೇಲೆ ಗದಾಪ್ರಹಾರ ಮಾಡುವ ಮೂಲಕ ಹೊಣೆಗೇಡಿತನ ಪ್ರದರ್ಶಿಸುತ್ತಿದೆ ಎಂದು ಎಚ್‌. ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಕೊರೊನಾ ಸಂಕಷ್ಟ ದೇವರ ಅಸಾಮಾನ್ಯ ಆಟ’ ಎನ್ನುವ ಮೂಲಕ ಒಕ್ಕೂಟ ವ್ಯವಸ್ಥೆಯ ರಾಜ್ಯಗಳ ಬಹುದೊಡ್ಡ ನಂಬಿಕೆಗೆ ಕೊಡಲಿಯೇಟು ನೀಡಿದೆ. ಸುಲಭ ಬಡ್ಡಿ ದರದಲ್ಲಿ ಸಾಲ ತೆಗೆದುಕೊಳ್ಳಿ ಎನ್ನುವ ಆಯ್ಕೆ ಮುಂದಿಟ್ಟು ರಾಜ್ಯಗಳ ಆರ್ಥಿಕತೆಗೆ ಕೇಂದ್ರ ಸರಕಾರ ಕೊಳ್ಳಿ ಇಟ್ಟಿದೆ ಎಂದು ಆರೋಪಿಸಿದ್ದಾರೆ.

ಈಗ ಸಂಗ್ರಹವಾಗಿರುವ ತೆರಿಗೆಯಲ್ಲಿ ರಾಜ್ಯ ಸರಕಾರಗಳಿಗೆ ಪರಿಹಾರ ನೀಡಲು 97 ಸಾವಿರ ಕೋ. ರೂ. ಹಾಗೂ ಆದಾಯ ಕೊರತೆ ಎದುರಾಗಲಿರುವ 2.35 ಲಕ್ಷ ಕೋಟಿ ರೂ.ಗಳನ್ನು ರಾಜ್ಯಗಳು ಸಾಲ ಪಡೆಯುವ ಆಯ್ಕೆಗಳನ್ನು ಮುಂದಿಡಲಾಗಿದೆ. ಕೊರೊನಾ ನೆಪ ಮುಂದಿಟ್ಟು ಆನ್ಯಾಯ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next