Advertisement

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

08:55 PM Jun 27, 2024 | Team Udayavani |

ಕೋಲಾರ: ಸರ್ಕಾರದಿಂದ ಬೆಂಗಳೂರಿನಲ್ಲಿ ಗುರುವಾರ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಆಹ್ವಾನಿಸದ್ದಕ್ಕೆ ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

Advertisement

ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸಲು ಮುಂದಾದ ಘಟನೆ ಜರುಗಿತು. ವೇದಿಕೆಯಲ್ಲಿ ಜೆಡಿಎಸ್‌ ಮುಖಂಡರು ಸಿಎಂ, ಡಿಸಿಎಂ ವಿರುದ್ಧ ಘೋಷಣೆ ಕೂಗಿದ್ದು ಶಾಸಕ ಕೊತ್ತೂರು ಮಂಜುನಾಥ್‌, ಎಂಎಲ್‌ಸಿ ಅನಿಲ್‌ಕುಮಾರ್‌ ಇತರರ ಆಕ್ರೋಶಕ್ಕೆ ಕಾರಣವಾಯಿತು. ಆಗ ಇಲ್ಲಿ ರಾಜಕೀಯ ಮಾಡುವುದು ಬೇಡ. ಮಾಡಲೇಬೇಕೆಂದರೆ ನಾವೂ ರೆಡಿ ಎಂದು ಅನಿಲ್‌ಕುಮಾರ್‌ ಕೂಗಾಡಿದರು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next