Advertisement

ರಾಜ್ಯದಲ್ಲಿ ಲವ್ ಜಿಹಾದಿಗಿಂತ ಮುಖ್ಯವಾದ ಹಲವು ಸಮಸ್ಯೆಗಳಿವೆ ಸರಕಾರ ಅದನ್ನು ಬಗೆಹರಿಸಲಿ :HDK

04:03 PM Dec 02, 2020 | sudhir |

ಮೈಸೂರು: ಲವ್ ಜಿಹಾದ್‌ ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ. ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ .

Advertisement

ರಾಜ್ಯದಲ್ಲಿ ಲವ್ ಜಿಹಾದ್ ಬಿಟ್ಟು ಹಲವಾರು ದೊಡ್ಡ ದೊಡ್ಡ ಸಮಸ್ಯೆಗಳಿವೆ ಅದನ್ನು ಮೊದಲು ಬಗೆಹರಿಸಲಿ ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಕುರಿತು ಹೇಳಿಕೆ ನೀಡಿದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕ್ರಾಸ್ ಬ್ರೀಡಿಂಗ್ ವಿಚಾರ ನನಗೆ ಬೇಡ. ಅದು ದೊಡ್ಡವರಿಗೆ ಸಂಬಂಧಪಟ್ಟ ವಿಚಾರ‌‌ ಎಂದು ಟಾಂಗ್ ನೀಡಿದ್ದಾರೆ.

ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ: ಗ್ರಾಮ ಪಂಚಾಯತ್ ಚುನಾವಣೆ ಪಕ್ಷಗಳ ಚಿಹ್ನೆ ಆಧಾರದ ಮೇಲೆ ನಡೆಯಲ್ಲ. ಹೀಗಾಗಿ ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ. ಗ್ರಾ.ಪಂ ಚುನಾವಣೆಯಲ್ಲಿ ಯಾವುದೇ ಪಕ್ಷ ಇರಲ್ಲ. ಇದರಲ್ಲಿ ಒಂದೇ ಪಕ್ಷದ ಇಬ್ಬರು, ಮೂವರು ಸ್ಪರ್ಧೆ ಮಾಡಬಹುದು. ಒಂದೇ ಕುಟುಂಬದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾಗಿರುವುದನ್ನು ನೋಡಿದ್ದೇವೆ. ಸ್ಥಳೀಯ ವಿಚಾರದ ಆಧಾರದ ಮೇಲೆ ಗ್ರಾ.ಪಂ ಚುನಾವಣೆ ನಡೆಯುತ್ತೆ‌. ಆದ್ದರಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಶಾಸಕ ಜಿ.ಟಿ.ದೇವೇಗೌಡ ನಮ್ಮನ್ನ ಬಿಟ್ಟು ಎಲ್ಲಿ ಹೋಗಿದ್ದಾರೆ: ಶಾಸಕ ಜಿ.ಟಿ ದೇವೇಗೌಡರ ಬಗ್ಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ ನಮ್ಮನ್ನ ಬಿಟ್ಟು ಎಲ್ಲಿ ಹೋಗಿದ್ದಾರೆ. ಅವರು ಇನ್ನೂ ಜೆಡಿಎಸ್ ನಲ್ಲಿಯೇ ಇದ್ದಾರೆ. ಅವರೇ ಮೊನ್ನೆ ಜೆಡಿಎಸ್ ನಲ್ಲಿ ಇದ್ದೇನೆ ಎಂದು ಹೇಳಿದ್ದಾರೆ. ಸರ್ಕಾರ ಕಾರ್ಯಕ್ರಮಗಳಲ್ಲಿ ಬಿಜೆಪಿಯವರ ವೇದಿಕೆ ಹಂಚಿಕೊಳ್ಳುವುದು ಸಾಮಾನ್ಯ. ಇದಕ್ಕೆ ಬೇರೆ ರೀತಿಯ ಅರ್ಥಗಳನ್ನು ಕಲ್ಪಿಸಿಕೊಳ್ಳುವುದು ಬೇಡ ಎಂದು ಸ್ಪಷ್ಟನೆ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಮುಂದಾಳತ್ವದಲ್ಲೇ ಗ್ರಾ.ಪ‌ಂ ಚುನಾವಣೆ ನಡೆಯಲಿದೆ. ಅವರು ಶಾಸಕರಾಗಿರುವಷ್ಟು ದಿನದವರೆಗೂ ನಮ್ಮ ಪಕ್ಷವನ್ನೇ ಬೆಂಬಲಿಸಬೇಕು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next