Advertisement

ರಾಧಿಕಾ ಯಾರೋ ಗೊತ್ತಿಲ್ಲ! ಅವರ ಬಗ್ಗೆ ನನ್ನ ಕೇಳಬೇಡಿ ಎಂದ ಕುಮಾರಸ್ವಾಮಿ

07:52 PM Jan 10, 2021 | Team Udayavani |

ಮಂಡ್ಯ: ರಾಧಿಕಾ ಯಾರೋ ಗೊತ್ತಿಲ್ಲ… ಅವರ ಬಗ್ಗೆ ನನ್ನ ಕೇಳಬೇಡಿ.. ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಳೆಕೆರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿಯವರಲ್ಲಿ ಸುದ್ದಿಗಾರರು ನಟಿ ರಾಧಿಕಾ ಅವರನ್ನು ಸಿಸಿಬಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಶ್ನೆ ಕೇಳಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಅವರು, ಯಾರಪ್ಪ ಅವರೆಲ್ಲ?, ಅದ್ಯಾರೋ ನನಗೆ ಗೊತ್ತಿಲ್ಲ. ಅವರ ಬಗ್ಗೆ ನನ್ನ ಕೇಳಬೇಡಿ ಎಂದು ರಾಧಿಕಾಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಲು ನಿರಾಕರಿಸಿದರು.

Advertisement

ಗುಮಾಸ್ತನಾಗಲು ಜಿಲ್ಲಾಧಿಕಾರಿ ಅನ್‌ಫಿಟ್: ಮಂಡ್ಯ ಜಿಲ್ಲಾಧಿಕಾರಿ ಗುಮಾಸ್ತನಾಗಲು ಅನ್‌ಫಿಟ್ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ:ಪತನಗೊಂಡ ಇಂಡೋನೇಷ್ಯಾ ವಿಮಾನದ ಬ್ಲ್ಯಾಕ್‌ಬಾಕ್ಸ್‌ ಪತ್ತೆ

ನೇರಳೆಕೆರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾಗ, ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ರಸ್ತೆ ಕಾಮಗಾರಿ ವಿಚಾರವಾಗಿ ಡಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next