Advertisement

ಎಚ್‌ಡಿಕೆ-ಸಿದ್ದು ಮಾತಿನ ಸಮರ: ನೋ ಕಾಮೆಂಟ್ಸ್‌ ಎಂದ ಡಿಕೆಶಿ

10:03 AM Nov 01, 2019 | Sriram |

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಪ್ರತಿಪಕ್ಷನಾಯಕ ಸಿದ್ದರಾಮಯ್ಯ ನಡುವಿನ ಮಾತಿನ ಸಮರ ನನಗೇನೂ ಗೊತ್ತಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಇಬ್ಬರೂ ಮುಖ್ಯಮಂತ್ರಿಗಳಾಗಿದ್ದವರು. ದೊಡ್ಡವರು, ಅವರ ಬಗ್ಗೆ ನಾನು ಯಾವುದೇ ಕಾಮೆಂಟ್‌ ಮಾಡುವುದಿಲ್ಲ ಎಂದು ತಿಳಿಸಿದರು.

ಇಬ್ಬರೂ ಯಾವ ವಿಚಾರ ಏನು ಮಾತನಾಡಿದ್ದಾರೆ ಎಂಬುದೇ ನನಗೆ ಗೊತ್ತಿಲ್ಲ. ಅದರ ಬಗ್ಗೆ ನಾನು ಹೇಗೆ ಮಾತನಾಡಲಿ. ದಯವಿಟ್ಟು ಆ ವಿಚಾರಗಳನ್ನು ನನ್ನ ಬಳಿ ಕೇಳಬೇಡಿ. ನನ್ನದು ಮಾತ್ರ ಕೇಳಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next