Advertisement

Pendrive Politics; ಸರಿಯಾದ ಸಮಯಕ್ಕೆ ಪೆನ್ ಡ್ರೈವ್ ದಾಖಲೆ ಬಿಡುಗಡೆ: ಕುಮಾರಸ್ವಾಮಿ

11:11 AM Jul 06, 2023 | Team Udayavani |

ಮೈಸೂರು: ಪೆನ್ ಡ್ರೈವ್ ದಾಖಲೆಯನ್ನು ಸೂಕ್ತ ಸಮಯದಲ್ಲಿ ಮಾತನಾಡುವೆ. ಈ ಸರ್ಕಾರ ಏನು ಮಾತಾಡಬೇಕು ಎಲ್ಲವನ್ನೂ ಮಾತನಾಡಲಿ. ಹಿಟ್ ಅಂಡ್ ರನ್ ಎನ್ನುತ್ತಾರೆ, ಏನಾದರೂ ಹೇಳಿಕೊಳ್ಳಲಿ. ಅವರು ಹೀಗೆ ಮಾತನಾಡುತ್ತಿರಲಿ, ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

Advertisement

ಮೈಸೂರಿನಲ್ಲಿ ಮಾತನಾಡಿದ ಅವರು, ವರ್ಗಾವಣೆ ದಂಧೆ ಸಿಎಂ ನೇತೃತ್ವದಲ್ಲೇ ನಡೆಯುತ್ತಿದೆ. ವರ್ಗಾವಣೆ ಆದೇಶ ಆಗುತ್ತದೆ. ತಕ್ಷಣ ಅದು ಬದಲಾವಣೆಯಾಗುತ್ತದೆ. ಸರ್ಕಾರ ನಡೆಯಬೇಕಾದರೆ ವರ್ಗಾವಣೆ ಅನಿವಾರ್ಯ. ಆದರೆ ಯಾವ ಅಳತೆಗೋಲು ಇಟ್ಟುಕೊಂಡು ವರ್ಗಾವಣೆ ಮಾಡುತ್ತಿದ್ದೀರಿ? ಇಷ್ಟೊಂದು ಅನುಭವ ಇಟ್ಕೊಂಡು ನಿಮಗೆ ಗೊತ್ತಿಲ್ವಾ? ಪ್ರಮುಖ ಎಲ್ಲಾ ಹುದ್ದೆಗಳೆಲ್ಲವೂ ದುಡ್ಡಿನಿಂದಲೇ ವರ್ಗಾವಣೆ ಆಗುತ್ತಿವೆ ಎಂದು ಆರೋಪಿಸಿದರು.

ಬಿಜೆಪಿಯವರು ವಿಪಕ್ಷ ಸ್ಥಾನದಲ್ಲಿದ್ದಾರೆ. ನಾವು ಕೂಡ ವಿಪಕ್ಷ‌ ಸ್ಥಾನದಲ್ಲಿ ಇದ್ದೇವೆ. ಬಿಜೆಪಿಯಲ್ಲಿ ಹಲವರು ಸಮರ್ಥ ನಾಯಕರಿದ್ದಾರೆ. ಬಿಜೆಪಿಯಲ್ಲಿಯೇ ವಿಪಕ್ಷ ನಾಯಕರು ಆಗುವವರು ಇದ್ದಾರೆ ಎಂದ ಅವರು, ನನ್ನ ಆಸ್ತಿಯನ್ನು ಕುರಿತು ಇಂಟರ್‌ನ್ಯಾಷನಲ್‌ ಸಂಸ್ಥೆಯಿಂದ ತನಿಖೆ ನಡೆಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next