Advertisement

K’taka polls: ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ; ಹೆಚ್.ಡಿ.ಕುಮಾರಸ್ವಾಮಿ

03:22 PM Apr 25, 2023 | Team Udayavani |

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್‌.ಡಿ.ದೇವೇಗೌಡ ಹಾಗೂ ಜಿಟಿ.ದೇವೇಗೌಡರಿಗೆ ಮೀಸಲಿದೆ. ಒಕ್ಕಲಿಗರ ಮತ ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆ ಇಲ್ಲ. ಕುಮಾರಸ್ವಾಮಿ ಬೆಂಬಲಿಸಿದ್ದಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡ ಅವರ ಮಾತಿಗೆ ಹೆಚ್‌ಡಿಕೆ ತಿರುಗೇಟು ನೀಡಿದರು.

Advertisement

ನನ್ನ ಹೆಸರು ದುರ್ಬಳಕೆ ಮಾಡಿಕೊಳ್ಳುವುದನ್ನು ಅವರು ನಿಲ್ಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡಗೆ ನಾನ್ಯಾಕೆ ಬೆಂಬಲ ನೀಡಲಿ ? ಒಕ್ಕಲಿಗರು ಸಿದ್ದೇಗೌಡ ಮಾತಿಗೆ ಕಿವಿಗೊಡಬೇಡಿ. ಸುಳ್ಳು ಹೇಳಿಕೊಂಡು ಓಡಾಡುತ್ತಿರುವವರನ್ನು ತಾಯಿ ಚಾಮುಂಡೇಶ್ವರಿ ‌ನೋಡಿಕೊಳ್ಳುತ್ತಾಳೆ. ಜಿ.ಟಿ.ದೇವೇಗೌಡ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದರೆ, ರಿವರ್ಸ್ ಗೇರ್ ಸರ್ಕಾರ ಆಗುತ್ತದೆ: ಅಮಿತ್‌ ಶಾ ವಾಗ್ದಾಳಿ

ಲಿಂಗಾಯತ ಸಿಎಂ ಹೇಳಿಕೆ ವಿಚಾರ‌ಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ. ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ. ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯ ಪಕ್ಷಗಳು ನಾಯಕರನ್ನು ಆಯ್ಕೆ ಮಾಡುತ್ತವೆ. ಆದರೆ ನಾಡಿನ ಹಿತದೃಷ್ಟಿ ಇಟ್ಟುಕೊಂಡು ಸಿಎಂ ಕೆಲಸ ಮಾಡಬೇಕು. ಆ ಸಮುದಾಯದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯೂ ಸರಿಯಲ್ಲ. ಅವರು ಒಬ್ಬ ಅನುಭವಿ ರಾಜಕಾರಣಿ. ಅಂಥವರ ಬಾಯಲ್ಲಿ ಆ ಮಾತು ಯಾಕೆ ಬಂತು ಅಂತ ಗೊತ್ತಿಲ್ಲ. ಯಾವ ಅರ್ಥದಲ್ಲಿ ಆ ಮಾತು ಹೇಳಿದ್ದರೋ ಗೊತ್ತಿಲ್ಲ. ಬಹುಶಃ ಕಾಂಗ್ರೆಸ್ ಮುಗಿಸಬೇಕು ಅಂತ ಆ ರೀತಿ ಹೇಳಿರಬಹುದು. ಭ್ರಷ್ಟಾಚಾರ ವಿಚಾರ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next