Advertisement

ಸೂತಕದ ಮನೆಯಲ್ಲಿ ಇದ್ದುಕೊಂಡು ಚುನಾವಣೆ ಎದುರಿಸುವ ದುರ್ವಿಧಿ ನಮ್ಮದು: HDK

03:19 PM Sep 30, 2020 | sudhir |

ಬೆಂಗಳೂರು : ಶಿರಾದಲ್ಲಿ ನಾವು ಸೂತಕದ ಮನೆಯಲ್ಲಿದ್ದೇವೆ. ಹೀಗಿದ್ದೂ ಚುನಾವಣೆ ಎದುರಿಸಬೇಕಿರುವುದು ನಮ್ಮ ದುರ್ವಿಧಿ. ನಾವು ಅನಿವಾರ್ಯವಾಗಿ ಎದುರಿಸಬೇಕಾದ ನೋವಿನ ಚುನಾವಣೆ ಇದು. ಇತರರು ಇದನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ. ಅವರಿಗೆ ಇದು ಲಾಭ-ನಷ್ಟದ ವಿಚಾರ. ಆದರೆ ನಾವು ಇಲ್ಲಿ ನಮ್ಮ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಕ ಬಯಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಟ್ವಿಟರ್ ನಲ್ಲಿ ವಿಧಾನ ಸಭಾ ಕ್ಷೇತ್ರಗಳ ಚುನಾವಣೆ ಕುರಿತು ಹೇಳಿಕೊಂಡಿರುವ ಹೆಚ್.ಡಿ.ಕೆ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಶಿರಾ ನಮ್ಮದೇ ಕ್ಷೇತ್ರ. ರಾಜರಾಜೇಶ್ವರಿ ನಗರವೂ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಅಚಲವಾಗಿದೆ. ಸೂಕ್ತ, ನ್ಯಾಯ ಸಮ್ಮತ ಅಭ್ಯರ್ಥಿಗಳನ್ನು ಶೀಘ್ರವೇ ಪಕ್ಷ ಘೋಷಿಸುತ್ತದೆ.

ಇದನ್ನೂ ಓದಿ :ಬಾಬ್ರಿ ಮಸೀದಿ ತೀರ್ಪು ಸತ್ಯಕ್ಕೇ ಜಯ: ಡಿಸಿಎಂ ಸವದಿ ಹರ್ಷ

ಶಿರಾ ನಾವು ಗೆದ್ದ ಕ್ಷೇತ್ರವೂ ಹೌದು, ಆಪರೇಷನ್ ಕಮಲ ಮೆಟ್ಟಿ ಉಳಿಸಿಕೊಂಡ ಕ್ಷೇತ್ರವೂ ಹೌದು. ಸತ್ಯನಾರಾಯಣ ಅವರು ಇಲ್ಲಿ ಗೆದ್ದಿದ್ದರು. ಬಿಜೆಪಿಯವರ ಆಮಿಷಕ್ಕೆ ಆಕರ್ಷಿತರಾಗದೇ ಕ್ಷೇತ್ರವನ್ನು ಜೆಡಿಎಸ್ಗೇ ಉಳಿಸಿಕೊಟ್ಟಿದ್ದರು. ಸತ್ಯನಾರಾಯಣ ಅವರು ಇದ್ದಿದ್ದರೆ ಈ ಕ್ಷೇತ್ರ ನಮ್ಮಲ್ಲೇ ಇರುತ್ತಿತ್ತು. ನ್ಯಾಯಬದ್ಧವಾಗಿ ಶಿರಾ ನಾವೇ ಗೆಲ್ಲಬೇಕಾದ ಕ್ಷೇತ್ರ ಎಂದರು.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next