Advertisement
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೀಗೆಂದು ಸವಾಲು ಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಸುರಕ್ಷಿತವಲ್ಲ ಎಂದು ಹೇಳಿ ವರುಣಾ, ಬಸವಕಲ್ಯಾಣ, ಗಂಗಾವತಿ, ಶಾಂತಿನಗರ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಗುಪ್ತದಳ ಇಲಾಖೆ ತಿಳಿಸಿದ ವರದಿ ಮುಖ್ಯಮಂತ್ರಿ ಹಾಗೂ ಗೃಹ ಕಚೇರಿಗೆ ಹೋಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಧಿಕಾರದ ದುರುಪಯೋಗ ಇದಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.
Related Articles
Advertisement
ಶೆಟ್ಟರ್ ಅವರು ಮುಖ್ಯಮಂತ್ರಿ ಸೇರಿದಂತೆ ಅನೇಕ ಹುದ್ದೆ ನಿಭಾಯಿಸಿದ್ದಾರೆ. ಐದು ಬಾರಿ ಗೆಲುವು ಸಾಧಿಸಿದ್ದಾರೆ. ಆದರೂ ಇಂದು ಕ್ಷೇತ್ರದಲ್ಲಿ ಮೋದಿ ಹೆಸರು ಹೇಳಿ ಮತಯಾಚಿಸುವ ಸ್ಥಿತಿ ಅವರಿಗೆ ಬಂದಿದೆ. ಹುಬ್ಬಳ್ಳಿ-ಧಾರವಾಡ ಸುತ್ತಮುತ್ತ ಅವರು ಏನೆಲ್ಲಾ ಮಾಡಿದ್ದಾರೆ ಗೊತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಎರಡು ಕಡೆ ಸ್ಪರ್ಧೆ ಮಾಡಿದ್ದರಲ್ಲ, ಸೋಲಿನ ಭೀತಿಯಿಂದಲೇ ಎಂಬುದನ್ನು ಸ್ಪಷ್ಟಪಡಿಸಲಿ ಎಂದರು.