Advertisement
ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗಲಿರುವ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು? ಎಂಬ ಮಾತು ಕೇಳಿ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.
Related Articles
Advertisement
ವೈದ್ಯರ ಮಾತಿನಂತೆ ಮಣಿಪಾಲ್ ಆಸ್ಪತ್ರೆ ಸೇರಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ಈ ಮಧ್ಯೆ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿ ಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ ಎನ್ನಲಾಗಿದೆ.
ಇದನ್ನೂ ಓದಿ : ರಾಯಚೂರು: ಪೊಲೀಸರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಕಿಡಿ
ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನು ಮಾಡಿದ್ದರ ಫಲವಾಗಿ ಬೆಡ್ ಸಿಕ್ಕಿದೆ.ಅದರೆ ಬೆಡ್ ಸಿಕ್ಕರೂ ಅವರು ತಕ್ಷಣ ಅಡ್ಮಿಟ್ ಆಗಲಾಗಿಲ್ಲ.ಬದಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಇಂದು ಅವರು ಹಾಜರಾಗಲೇ ಬೇಕಿದೆ.
ಆದರೆ ಕೋವಿಡ್ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದು ಅಪಾಯ.ಹೀಗಾಗಿ ವಿಡಿಯೋ ಕಾನ್ ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ ಕುಮಾರಸ್ವಾಮಿ,ಈಗ ಕ್ಯಾಮೆರಾ ಮುಂದೆ ಕೂತಿದ್ದಾರೆ. ನ್ಯಾಯಾಲಯದ ವಿಚಾರಣೆ ಮುಗಿದ ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಚ್ ಎಂ ರಮೇಶಗೌಡ ಅವರು ಈ ಮಾಹಿತಿ ನೀಡಿದ್ದಾರೆ.