Advertisement

ಎಚ್‌.ಡಿ.ಕೋಟೆ ಶಾಸಕ  ಚಿಕ್ಕಮಾದು ಆಸ್ಪತ್ರೆಗೆ ದಾಖಲು

06:45 AM Oct 14, 2017 | |

ಮೈಸೂರು: ಎಚ್‌.ಡಿ.ಕೋಟೆ ಶಾಸಕ ಎಸ್‌.ಚಿಕ್ಕಮಾದು ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಪಿಂಡ ವೈಫ‌ಲ್ಯದಿಂದಾಗಿ ವರ್ಷದ ಹಿಂದೆ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು. 

Advertisement

ಆ ವೇಳೆ ಸುಮಾರು ಆರು ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು, ನಂತರ ಚೇತರಿಸಿಕೊಂಡು ಮೊದಲಿನಂತೆ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೂ ಪದೇಪದೆ ಅನಾರೋಗ್ಯ ಕಾಡುತ್ತಿತ್ತು. ಇದೀಗ ಮತ್ತೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪಅವರು ಶುಕ್ರವಾರ ಪ್ರತ್ಯೇಕವಾಗಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
 

Advertisement

Udayavani is now on Telegram. Click here to join our channel and stay updated with the latest news.

Next