Advertisement

ತುಮಕೂರಿಂದಲೇ ಗೌಡ ಸ್ಪರ್ಧೆ

12:30 AM Mar 23, 2019 | |

ಬೆಂಗಳೂರು: ಮೊಮ್ಮಗನಿಗೆ ಹಾಸನ ಕ್ಷೇತ್ರ ಬಿಟ್ಟುಕೊಟ್ಟು ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ತೊಯ್ದಾಟ ದಲ್ಲಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇ ಗೌಡ ಅಂತಿಮವಾಗಿ ತುಮಕೂರು ಕ್ಷೇತ್ರದಿಂದ ಸ್ಪರ್ಧೆಗೆ ತೀರ್ಮಾನಿಸಿದ್ದಾರೆ.

Advertisement

ಪದ್ಮನಾಭನಗರ ನಿವಾಸದಲ್ಲಿ ಶುಕ್ರವಾರ ರಾತ್ರಿ ನಡೆದ ತುಮಕೂರು ಜಿಲ್ಲೆಯ ಜೆಡಿಎಸ್‌ ಸಚಿವರು, ಶಾಸಕರು, ಮಾಜಿ ಶಾಸಕರು,  ಮುಖಂಡರ ಸಭೆಯಲ್ಲಿ ಅಂತಿಮ ವಾಗಿ ಅಲ್ಲಿಂದಲೇ ಸ್ಪರ್ಧೆ ಮಾಡಲು ನಿರ್ಧರಿಸ ಲಾಯಿತು. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜತೆಯೂ ದೇವೇಗೌಡ ಈ ಕುರಿತು ಚರ್ಚಿಸಿದರು.

ಸೋಮವಾರ ದೇವೇಗೌಡ ಅವರು ತುಮಕೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ನಾಮಪತ್ರ ಸಲ್ಲಿಕೆ ಬಳಿಕ ಹೆಚ್ಚು ಜನರನ್ನು ಸೇರಿಸಿ ಸಾರ್ವಜನಿಕ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ದೇವೇಗೌಡ ತುಮಕೂರು ಕ್ಷೇತ್ರದಿಂದ ಸ್ಪರ್ಧೆಗೆ ತೀರ್ಮಾನಿಸಿರುವುದರಿಂದ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎಂಬುದು ಈಗ ಕುತೂಹಲ ಮೂಡಿಸಿದೆ. ಆ ಕ್ಷೇತ್ರದಿಂದ ಕಾಂಗ್ರೆಸ್‌ನ ಬಿ.ಎಲ್‌.ಶಂಕರ್‌ ಜೆಡಿಎಸ್‌ ಚಿಹ್ನೆಯಡಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next