Advertisement

ಕುಟುಂಬ ರಾಜಕಾರಣಕ್ಕೆ ಜನ ತಕ್ಕ ಪಾಠ: ಯಡಿಯೂರಪ್ಪ

11:04 PM Mar 25, 2019 | Team Udayavani |

ಹಾಸನ: ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ 24 ಗಂಟೆಯೊಳಗೇ ಜೆಡಿಎಸ್‌ – ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಇರಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

Advertisement

ಹಾಸನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಎ.ಮಂಜು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಿ.ಎಂ. ರಸ್ತೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು.

ಕುಟುಂಬ ರಾಜಕಾರಣದಿಂದ ಬೇಸತ್ತಿರುವ ಜನರು ಈ ಚುನಾವಣೆಯಲ್ಲಿ ಜೆಡಿಎಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಹಣಬಲ, ತೋಳ್ಬಲ: ಮಂಡ್ಯದಲ್ಲಿ ಜೆಡಿಎಸ್‌ನವರು ಹಣ, ತೋಳ್ಬಲ, ಅಧಿಕಾರದ ಬಲದಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಆ ಕ್ಷೇತ್ರದ ಬಿಜೆಪಿ ಬೆಂಬಲಿತ
ಅಭ್ಯರ್ಥಿ ಸುಮಲತಾ ಅವರು ಭಾನುವಾರ ನನ್ನನ್ನು ಭೇಟಿಯಾಗಿ ಅಳಲು ತೋಡಿಕೊಂಡರು. ಅಂಬರೀಶ್‌ ಅವರು ಸಾವನ್ನಪ್ಪಿದಾಗ ಅವರನ್ನು ಹಾಡಿ ಹೊಗಳಿದ್ದ ಎಚ್‌.ಡಿ.ಕುಮಾರಸ್ವಾಮಿ ಅವರು ಈಗ ಮಂಡ್ಯಕ್ಕೆ ಅಂಬರೀಶ್‌ ಕೊಡುಗೆ ಏನು ಎಂದು ಕೇಳುವಂತ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next