Advertisement
ಸೋಮವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್ಗೆ 6-7 ಸ್ಥಾನ ಬಿಟ್ಟುಕೊಡುವುದಾಗಿ ಕಾಂಗ್ರೆಸ್ ಪ್ರಸ್ತಾಪಿಸಿರುವ ಬೆನ್ನಲ್ಲೇ, ಮೈಸೂರು ಕ್ಷೇತ್ರ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಠ ಹಿಡಿದಿದ್ದಾರೆ. ಇನ್ನೊಂದೆಡೆ, ಸದ್ಯ ಕಾಂಗ್ರೆಸ್ ಸಂಸದರಿರುವ ತುಮಕೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಬಿಟ್ಟುಕೊಡಿ ಎಂದು ದೇವೇಗೌಡರು ಬೇಡಿಕೆ ಇಟ್ಟಿರುವುದು ಹೈಕಮಾಂಡ್ಗೆ ಇಕ್ಕಟ್ಟಿನ ಸ್ಥಿತಿ ಎದುರಿಸುವಂತಾಗಿದೆ. ಅತ್ತ ಸಿದ್ದರಾಮಯ್ಯ ವಿರೋಧದ ನಡುವೆ ಸೀಟು ಹಂಚಿಕೆ ಮಾಡುವಂತಿಲ್ಲ, ಇತ್ತ ದೇವೇಗೌಡರ ಮಾತಿಗೆ ಮನ್ನಣೆನೀಡ ದಿರುವಂತೆಯೂ ಇಲ್ಲ ಎಂಬ ಸ್ಥಿತಿ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಎದುರಾಗಿದೆ.
ಬನ್ನಿ’ ಎಂದು ಹೇಳಿ ಹದಿನೈದು ನಿಮಿಷದಲ್ಲೇ ನಿರ್ಗಮಿಸಿದರು. ಆ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಜೆಡಿಎಸ್ಗೆ ಮಂಡ್ಯ, ಹಾಸನ, ಶಿವಮೊಗ್ಗ, ಬೆಂಗಳೂರು ಉತ್ತರ, ವಿಜಯಪುರ ಕ್ಷೇತ್ರ ಬಿಟ್ಟುಕೊಡಲು ಒಪ್ಪಿಗೆ ಸಿಕ್ಕಿದೆಯಾದರೂ ಮೈಸೂರು ಕ್ಷೇತ್ರ ಬಿಟ್ಟುಕೊಡಲು ಒಪ್ಪದಿರುವುದು ಜೆಡಿಎಸ್ ಸಿಟ್ಟಿಗೆ ಕಾರಣವಾಗಿದೆ.
Related Articles
Advertisement
ಹಿಂದುಳಿದ ವರ್ಗದವರಿಗೆ ಅವಕಾಶ?: ಬೆಂಗಳೂರು ಉತ್ತರದಲ್ಲಿ ದೇವೇಗೌಡ, ಮಂಡ್ಯದಲ್ಲಿ ನಿಖೀಲ್, ಹಾಸನದಲ್ಲಿ ಪ್ರಜ್ವಲ್ ಕಣಕ್ಕಿಳಿದರೆ ತುಮಕೂರು ಕಾಂಗ್ರೆಸ್ಗೆ ಬಿಟ್ಟುಕೊಟ್ಟರೆ ಹಿಂದುಳಿದ ವರ್ಗದ ಅಭ್ಯರ್ಥಿಗೆ ಅವಕಾಶ ಕಲ್ಪಿಸುವ ಚಿಂತನೆಯೂ ಜೆಡಿಎಸ್ನಲ್ಲಿದೆ. ವಿಧಾನಪರಿಷತ್ನ ಮಾಜಿ ಸದಸ್ಯ ರಮೇಶ್ಬಾಬು ಆಕಾಂಕ್ಷಿಯಾಗಿದ್ದಾರೆ. ಜತೆಗೆ, ಎಂ.ಟಿ.ಕೃಷ್ಣಪ್ಪ, ಎಚ್.ನಿಂಗಯ್ಯ ಟಿಕೆಟ್ ಕೇಳುತ್ತಿದ್ದಾರೆ.
ಇಂದು ರಾಹುಲ್ ಭೇಟಿ? ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮಂಗಳವಾರ ದೆಹಲಿಗೆ ತೆರಳಿದ್ದು ಬುಧವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಜತೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸುವ ಸಾಧ್ಯತೆಯಿದೆ. ರಾಹುಲ್ ಗಾಂಧಿಯವರು ದೆಹಲಿಯಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಉಪಾಹಾರಕ್ಕೆ ಆಗಮಿಸಲಿದ್ದಾರೆ. ಅಲ್ಲೇ ಸೀಟು ಹಂಚಿಕೆ ಮಾತುಕತೆ ನಡೆಯಲಿದೆ ಎಂದು ಹೇಳಲಾಗಿದೆ. ಈ ಮಧ್ಯೆ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಮಂಗಳವಾರ ಸಂಜೆ ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಸೋಮವಾರ ಸಮನ್ವಯ ಸಮಿತಿ ಸಭೆಯಲ್ಲಿ ನಡೆದ ಮಾತುಕತೆ ವಿವರಗಳನ್ನು ದೇವೇಗೌಡರಿಗೆ ನೀಡಿದರು ಎಂದು ಹೇಳಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯ ಮತಗಳಿಕೆ ಆಧಾರದ ಮೇಲೆ ಹಾಗೂ ಪ್ರಸ್ತುತ ಪಕ್ಷದ ಸಾಮರ್ಥ್ಯ ಪರಿಗಣಿಸಿ
ಸೀಟು ಹಂಚಿಕೆಯಾಗಲಿ ಎಂದು ಕುಮಾರಸ್ವಾಮಿ ದೇವೇಗೌಡರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.