Advertisement

ದೌರ್ಬಲ್ಯದ ಹೇಳಿಕೆಗಳು ಸಿಎಂ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ:BSY

02:10 PM Sep 16, 2018 | Team Udayavani |

ಅರಸೀಕೆರೆ : ‘ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗಳು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ. ಅವರು ಸುಳ್ಳು ಆರೋಪಗಳನ್ನು ಮಾಡುವುದನ್ನು ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಮಾಡಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಭಾನುವಾರ ಕಿಡಿ ಕಾರಿದ್ದಾರೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ ‘ಮುಖ್ಯಮಂತ್ರಿಗಳು ಇಸ್ಪಿಟ್‌ ದಂಧೆಯ ಹಣ ಬಳಸಿರುವ ಕುರಿತು ಹೇಳುತ್ತಾರೆ. ಅವರ ಬಳಿ ಅಧಿಕಾರ ಇದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಅವರ ಹೇಳಿಕೆ ದೌರ್ಬಲ್ಯವನ್ನು ಎತ್ತಿ ತೋರಿಸುತ್ತದೆ’ ಎಂದರು. 

‘ಕಾಂಗ್ರೆಸ್‌ನಲ್ಲೇ ಗೊಂದಲ ಇದ್ದು, ಸರ್ಕಾರ ಪತನಗೊಳಿಸಲು ಬಿಜೆಪಿ ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ನಾವು 104 ಜನ ಶಾಸಕರು ಒಗ್ಗಟ್ಟಾಗಿದ್ದು  ವಿಪಕ್ಷದ ಕೆಲಸ ಮಾಡುತ್ತೇವೆ’ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next