Advertisement

ಅಭ್ಯರ್ಥಿ ಜಿಟಿಡಿ ಪರ ಎಚ್‌ಡಿಕೆ ಪ್ರಚಾರ

12:49 PM Apr 17, 2018 | |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಪ್ರಚಾರ ನಡೆಸಿದರೆ, ಅವರಿಗೆ ಸವಾಲು ಎಸೆಯುವಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮೂರನೇ ದಿನವು ಜೆಡಿಎಸ್‌ ರಾಜಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅಬ್ಬರದ ಪ್ರಚಾರ ನಡೆಸಿದರು. ಕ್ಷೇತ್ರದ ಹಲವು ಗ್ರಾಮಗಳಲ್ಲಿ ರೋಡ್‌ ಶೋ ನಡೆಸಿ ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡ ಪರ ಮತಯಾಚಿಸಿದರು. 

Advertisement

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಹೂಟಗಳ್ಳಿ ಗ್ರಾಮದಿಂದ ಬೆಳಗ್ಗೆ 11.05ಕ್ಕೆ ರೋಡ್‌ ಶೋ ಆರಂಭಿಸಿದ ಕುಮಾರಸ್ವಾಮಿ, ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡ ಹಾಗೂ ಸ್ಥಳೀಯ ಮುಖಂಡರೊಂದಿಗೆ ತೆರೆದ ವಾಹನದಲ್ಲಿ ಮತಯಾಚನೆ ನಡೆಸಿದರು.

ಹೂಟಗಳ್ಳಿ ಗ್ರಾಮಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರಿಗೆ ಅದ್ಧೂರಿ ಸ್ವಾಗತ ದೊರೆಯಿತು. ಜೆಡಿಎಸ್‌ ಬೆಂಬಲಿಗರು, ಪಟಾಕಿ ಸಿಡಿಸಿ, ಹೂವಿನ ಮಳೆಗರೆದು, ಕುಮಾರಸ್ವಾಮಿ ಹಾಗೂ ಜಿ.ಟಿ.ದೇವೇಗೌಡ ಪರವಾಗಿ ಜೈಕಾರ ಕೂಗಿದರು. ಪ್ರಚಾರ ಆರಂಭಕ್ಕೂ ಮುನ್ನ ಹೂಟಗಳ್ಳಿಯ ಎಸ್‌ಆರ್‌ಎಸ್‌ ಕಾಲೋನಿಯಲ್ಲಿರುವ ಜೆಡಿಎಸ್‌ ಮುಖಂಡ ನಿಂಗೇಗೌಡರ ನಿವಾಸಕ್ಕೆ ಭೇಟಿ ನೀಡಿದರು.

ಹಲವು ವರ್ಷಗಳ ಕಾಲ ಜೆಡಿಎಸ್‌ ಪಕ್ಷದಲ್ಲಿ ಗುರುತಿಸಿಕೊಂಡ 82 ವರ್ಷದ ವಯೋವೃದ್ಧ ನಿಂಗೇಗೌಡರನ್ನು ಭೇಟಿಯಾದ ಕುಮಾರಸ್ವಾಮಿ, ಯೋಗಕ್ಷೇಮ ವಿಚಾರಿಸಿದರು. ಈ ವೇಳೆ ಕುಮಾರಸ್ವಾಮಿ ಅವರಿಗೆ ಅಕ್ಷತೆ ಹಾಕಿ, ತಿರುಪತಿ ಪ್ರಸಾದ ನೀಡಿದ ನಿಂಗೇಗೌಡರು, ಚುನಾವಣೆಯ ಯಶಸ್ಸು ಲಭಿಸಲಿ ಎಂದು ಹಾರೈಸಿದರು. 

Advertisement

Udayavani is now on Telegram. Click here to join our channel and stay updated with the latest news.

Next