Advertisement

ರಾಮನಗರದಿಂದಲೇ ಎಚ್‌.ಡಿ.ಕೆ ಸ್ಪರ್ಧೆ: ಎಚ್‌.ಡಿ ದೇವೇಗೌಡ

07:30 AM Oct 02, 2017 | Harsha Rao |

ರಾಮನಗರ: ಮುಂದಿನ ಚುನಾವಣೆಯಲ್ಲಿ ರಾಮನಗರ ವಿಧಾನಸಭೆ ಕ್ಷೇತ್ರದಿಂದ ಎಚ್‌.ಡಿ.ಕುಮಾರಸ್ವಾಮಿ ಮತ್ತು ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಎ.ಮಂಜು ಅವರನ್ನು ಕಣಕ್ಕಿಳಿಸುವುದಾಗಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಘೋಷಿಸಿದರು. ತಾಲೂಕಿನ ಕೂಟಗಲ್‌ ಹೋಬಳಿ ಯರೇಹಳ್ಳಿಯಲ್ಲಿ ಭಾನುವಾರ ಜೆಡಿಎಸ್‌
ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್‌ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸುವುದಾಗಿ ತಿಳಿಸಿದರು. ಕುಮಾರಸ್ವಾಮಿ ರಾಮನಗರ ಕ್ಷೇತ್ರವನ್ನು ಬಿಟ್ಟು ಎಲ್ಲೂ ಹೋಗಲ್ಲ. ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿ ತಪ್ಪು ಮಾಡಿದ್ದಾರೆ ಎಂದರು.

Advertisement

ಕಾವೇರಿ ನದಿ ನೀರಿನ ವಿವಾದ ಕುರಿತು ಸುಪ್ರೀಂ ಕೋರ್ಚ್‌ ನೀಡುವ ಅಂತಿಮ ತೀರ್ಪಿನಿಂದ ರಾಜ್ಯಕ್ಕೆ ಆಗುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿಲ್ಲ. ಒಂದು ವೇಳೆ ರಾಜ್ಯಕ್ಕೆ ವ್ಯತಿರಿಕ್ತ ತೀರ್ಪು ಬಂದರೆ ಕಾವೇರಿ ಕಣಿವೆ
ಪ್ರದೇಶ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಎಚ್ಚರಿಕೆ ನೀಡಿದರು. ಹಲವಾರು ಭಾಗ್ಯಗಳನ್ನು ಕೊಟ್ಟಿರುವ ಸಿದ್ದರಾಮಯ್ಯರವರು ಸಾವಿನ ಭಾಗ್ಯ ಕರುಣಿಸದಿದ್ದರೆ ಸಾಕು ಎಂದು ಗೌಡರು ಲೇವಡಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next