Advertisement

ಯುವ ಮುಖಂಡರೊಂದಿಗೆ ಎಚ್‌ಡಿಕೆ ಸಂವಾದ

02:02 PM Jun 10, 2020 | Suhan S |

ಗದಗ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮಂಗಳವಾರ ರಾಜ್ಯದ ಯುವ ಮುಖಂಡರ ಜೊತೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜೆಡಿಎಸ್‌ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಪ್ರಭುರಾಜಗೌಡ ವಿ. ಪಾಟೀಲ ಭಾಗವಹಿಸಿ ರೈತರ ಸಮಸ್ಯೆಗಳ ಕುರಿತು ಗಮನ ಸೆಳೆದರು.

Advertisement

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಪ್ರಭುರಾಜಗೌಡ ಪಾಟೀಲ್‌, ರಾಜ್ಯದಲ್ಲಿ ಲಾಕ್‌ ಡೌನ್‌ನಿಂದಾಗಿ ಈ ಭಾಗದ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆಗೆ ಸರಿಯಾದ ಬೆಲೆ ಸಿಗದೇ ಪರದಾಡುತ್ತಿದ್ದಾರೆ. ಅದಕ್ಕಾಗಿ ಸರಕಾರದಿಂದ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ಹಾಗೂ ಅರ್ಧ ಬೆಲೆಯಲ್ಲಿ ರಸಗೊಬ್ಬರ ನೀಡಬೇಕು. ಹಾವೇರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ರೈತರು ಸೋಯಾ ಬೀಜ ಬಿತ್ತನೆ ಮಾಡಿದ್ದಾರೆ. ಅದು ಸಮರ್ಪಕವಾಗಿ ಬೆಳೆ ಕೈಗೆ ಬಾರದೇ, ರೈತರು ಪದೇ ಪದೆ ನಷ್ಟ ಅನುಭವಿಸುವಂತಾಗಿದೆ. ಬಿತ್ತನೆ ಬೀಜಗಳು ಕಳಪೆಯಾಗಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದ್ದು, ಈ ಕುರಿತು ಸರಕಾರದ ಗಮನ ಸೆಳೆಯಬೇಕಿದೆ ಎಂದು ಒತ್ತಾಯಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಈ ಎಲ್ಲ ಅಂಶಗಳ ಬಗ್ಗೆ ಸರ್ಕಾರದ ಗಮನ ಸೆಳೆದು ರೈತರ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next