Advertisement

HDK-CPY ಮಾತುಕತೆ; ಲೋಕಸಮರಕ್ಕೆ ಸದ್ದಿಲ್ಲದೆ ಬಿಜೆಪಿ-ಜೆಡಿಎಸ್ ಸಿದ್ಧತೆ

08:41 PM Jan 05, 2024 | Team Udayavani |

ರಾಮನಗರ: ಲೋಕಸಭಾ ಚುನಾವಣೆ ಹಣಾಹಣಿಗೆ ಸದ್ದಿಲ್ಲದೆ ಬಿಜೆಪಿ-ಜೆಡಿಎಸ್ ಸಿದ್ಧತೆ ಮಾಡಿಕೊಳ್ಳುತ್ತಿದ್ದು,ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ತಂತ್ರ ಹಣೆದಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಬಿಜೆಪಿ ನಾಯಕ ಸಿ.ಪಿ.ಯೊಗೇಶ್ವರ್ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Advertisement

ಮಾಗಡಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾಜಿ ಸಚಿವ ಯೊಗೇಶ್ವರ್ ಮಾತನಾಡಿ, ಗುರುವಾರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದಾಗಿ ಹೇಳಿದ್ದಾರೆ. ನಾನು ಕುಮಾರಸ್ವಾಮಿರನ್ನ ಭೇಟಿ ಮಾಡಿದ್ದು, ಕೆಲ ರಾಜಕೀಯ ವಿಚಾರಗಳ ಚರ್ಚೆ ಮಾಡಿದ್ದೇವೆ.ಸಂಕ್ರಾಂತಿ ಬಳಿಕ ಸಂಘಟನೆ ಹೆಚ್ಚಿಸಬೇಕಿದೆ.ಈ ಬಗ್ಗೆ ಮಾತನಾಡಲು ಕುಮಾರಸ್ವಾಮಿ ತಿಳಿಸಿದ್ದರು, ಹಾಗಾಗಿ ಭೇಟಿ ಮಾಡಿದ್ದೆ.ಸಂಕ್ರಾಂತಿ ಬಳಿಕ ಬಿಜೆಪಿ – ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಸಭೆ ಮಾಡುತ್ತೇವೆ ಎಂದರು.

ಕುಮಾರಸ್ವಾಮಿ ಅವರು ಶೀಘ್ರದಲ್ಲೇ ದೆಹಲಿಗೆ ಹೋಗುತ್ತಿದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಿಕೊಂಡು ಬರುವವರಿದ್ದಾರೆ.ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ಅಭ್ಯರ್ಥಿ ಬಗ್ಗೆ ಆತುರ ಬೇಡ ಎಂದರು.

ದತ್ತಪೀಠ ಕೇಸ್ ರೀ ಓಪನ್ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಗಳು ಈಗೀಗ ಕಟುವಾಗಿ ನಡೆದುಕೊಳ್ಳುತ್ತಿದ್ದಾರೆ.ಹಿಂದೂ ಕಾರ್ಯಕರ್ತರ ಹಳೇ ಕೇಸ್ ಗಳನ್ನ ಓಪನ್ ಮಾಡುತ್ತಿದ್ದಾರೆ. ಅವರ ವಿರುದ್ಧ ಮಾತನಾಡಿದರೂ ಕೇಸ್ ಹಾಕಿಸುತ್ತಾರೆ. ಮುಂದೆ ಜನ ಇದಕ್ಕೆ ಉತ್ತರ ಕೊಡುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next