Advertisement

ಬಸ್‌ ಪ್ರಯಾಣ ದರ ಏರಿಕೆಗೆ ಎಚ್‌ಡಿಕೆ ಟೀಕೆ

11:31 PM Feb 26, 2020 | Lakshmi GovindaRaj |

ಬೆಂಗಳೂರು: ಬಸ್‌ ಪ್ರಯಾಣ ದರ ಹೆಚ್ಚಿಸಿ ಜನಸಾಮಾನ್ಯರ ಮೇಲೆ ಹೊರೆ ಹಾಕಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಜನಸಾಮಾನ್ಯರು ದೈನಂದಿನ ಜೀವನ ನಿರ್ವಹಣೆ ಮಾಡುವುದು ದುಸ್ತರವಾಗಿದೆ.

Advertisement

ಇಂತಹ ಸಂದರ್ಭದಲ್ಲಿ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಅನಿವಾರ್ಯ ಇತ್ತೇ ಎಂದು ಪ್ರಶ್ನಿಸಿದ್ದಾರೆ. ಸಾರಿಗೆ ನಿಗಮಗಳು ನಷ್ಟದಲ್ಲಿರುವುದರಿಂದ ಸರಿದೂಗಿಸಲು ದರ ಹೆಚ್ಚಳ ಮಾಡಲಾಗಿದೆ ಎಂಬುದು ಸಮರ್ಥನೀಯವಲ್ಲ. ಸಂಸ್ಥೆಗಳಲ್ಲಿ ಸೋರಿಕೆ ತಡೆಗಟ್ಟಲು ಸರ್ಕಾರ ಬಿಗಿ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next