Advertisement

ಮೇಸ್ತ ಪ್ರಕರಣ; ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ; HDK ಕಿಡಿ

03:50 PM Dec 12, 2017 | Sharanya Alva |

ಬೆಂಗಳೂರು: ಸಣ್ಣ ಘಟನೆಗಳನ್ನೇ ದೊಡ್ಡದು ಮಾಡಲಾಗುತ್ತಿದೆ. ಇದೆಲ್ಲಾ ರಾಷ್ಟ್ರೀಯ ಪಕ್ಷಗಳ ಹುನ್ನಾರ. ಇದ್ರಲ್ಲಿ ಅಮಾಯಕರನ್ನು ಬಲಿ ತೆಗೆದುಕೊಳ್ಳಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Advertisement

ಹೊನ್ನಾವರದ ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣದಿಂದ ಉಂಟಾದ ಹಿಂಸಾಚಾರದ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷಗಳು ಜನರಲ್ಲಿ ಭಯಭೀತ ಹುಟ್ಟಿಸುವಂತಹ ವಾತಾವರಣ ಸೃಷ್ಟಿಸುತ್ತಿವೆ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ನಾನು ಹಿಂದೂ ಸಂಘಟನೆಗಳು ಹಾಗೂ ಮುಸ್ಲಿಂ ಬಂಧುಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ರಾಷ್ಟ್ರೀಯ ಪಕ್ಷಗಳ ಚಿತಾವಣಿಯಿಂದ ಶಾಂತಿ ವಾತಾವರಣ ಕಲುಷಿತಗೊಳಿಸುತ್ತಿವೆ. ಹೀಗಾಗಿ ಇಂತಹ ಚಿತಾವಣೆಗೆ ಬಲಿಯಾಗಬೇಡಿ ಎಂದು ಹೇಳಿದರು.

ಇಷ್ಟೆಲ್ಲಾ ಆದರೂ ಈ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯನವರಿಗೆ ಆಡಳಿತದಲ್ಲಿ ಹಿಡಿತ ತಪ್ಪಿದೆ. ಕುಮಟಾದಲ್ಲಿ ಡಿಐಜಿ ಶ್ರೇಣಿಯ ಅಧಿಕಾರಿ ವಾಹನಕ್ಕೆ ಬೆಂಕಿಹಚ್ಚಿದ್ದಾರೆ. ನೀವು(ಕಾಂಗ್ರೆಸ್) ರಾಜ್ಯವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next