Advertisement

ಎಚ್‌ಡಿಕೆ ನಾಳೆ ಸಂಜೆಯವರೆಗೆ ಮಾತ್ರ ಮುಖ್ಯಮಂತ್ರಿ : ಡಿವಿಎಸ್‌

07:25 AM May 23, 2019 | Vishnu Das |

ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ಅವರು ನಾಳೆ ಸಂಜೆ, ಹೆಚ್ಚೆಂದರೆ ನಾಡಿದ್ದು ಬೆಳಗ್ಗಿನವರೆಗೆ ಮಾತ್ರ ಸಿಎಂ ಆಗಿರುತ್ತಾರೆ.ನಾವು ಹೊಸ ಸರಕಾರ ರಚನೆ ಸಿದ್ಧತೆ ನಡೆಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಬುಧವಾರ ಭವಿಷ್ಯ ನುಡಿದಿದ್ದಾರೆ.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿವಿಎಸ್‌, ಶೇಕಡಾ ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಅವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂದರು.

ಕುಮಾರಸ್ವಾಮಿ ಮತ್ತು ಚಂದ್ರಬಾಬು ನಾಯ್ಡು ಸಮಾನ ಮನಸ್ಕರು, ಅಧಿಕಾರ ಕಳೆದುಕೊಳ್ಳವವರೆಲ್ಲಾ ತಿರುಗಾಡಲೇ ಬೇಕು ಎಂದರು.

ಸತ್ಯ ಹೆಚ್ಚು ದಿನ ಮುಚ್ಚಿಡಲಾಗುವುದಿಲ್ಲ. ಮಾಜಿ ಸಚಿವ ರೋಷನ್‌ ಬೇಗ್‌ ಸತ್ಯವನ್ನು ಹೇಳಿದ್ದಾರೆ. ಸಿದ್ದರಾಮಯ್ಯ ರಾಜ್ಯ ಕಂಡ ಅತೀ ದುರಹಂಕಾರಿ ಮುಖ್ಯಮಂತ್ರಿ ಎಂದರು.

ನಾನು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಗೆಲ್ಲುವುದು ಖಚಿತ, ಗೆಲುವಿನ ಅಂತರದಲ್ಲಿ ಕಳೆದ ಬಾರಿಗಿಂತ ವ್ಯತ್ಯಾಸವಾಗಬಹುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next