Advertisement

ಸಿಎಂ ಸ್ಥಾನವನ್ನ ಸಿದ್ದರಾಮಯ್ಯ ಬೇರೆಯವರಿಗೆ ಬಿಟ್ಟುಕೊಡುತ್ತಾರಾ? ಹೆಚ್ ಡಿಕೆ ಪ್ರಶ್ನೆ

08:31 PM Oct 24, 2021 | Team Udayavani |

ಮೈಸೂರು: ಜೆಡಿಎಸ್‌ ಪ್ರಚಾರ ಕಾರ್ಯಕ್ರಮವೊಂದರ ಬ್ಯಾನರ್‌ನಲ್ಲಿ ತಮ್ಮ ಫೋಟೋ ಇಲ್ಲವೆಂದು ಮುನಿಸಿಕೊಂಡು ಕಾರ್ಯಕ್ರಮದಿಂದ ದೂರ ಉಳಿದಿದ್ದ ಸಿದ್ದರಾಮಯ್ಯ, ಇನ್ನು ಸಿಎಂ ಸ್ಥಾನವನ್ನ ಬೇರೆಯವರಿಗೆ ಬಿಟ್ಟುಕೊಡುತ್ತಾರಾ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

Advertisement

ಜಿಲ್ಲಾ ಪತ್ರಕರ್ತರ ಭವನದಲ್ಲಿ ಸಂವಾದ ನಡೆಸಿ, ನಾನು ಜೆಡಿಎಸ್‌ನಲ್ಲಿದ್ದಾಗ ಪಕ್ಷ ಸಂಘಟಿಸಿದ್ದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾರ್ಯಕ್ರಮ ವೇದಿಕೆ ನಿರ್ಮಾಣ, ಶಾಮಿಯಾನ ಹಾಕುವುದು, ಬಂಟಿಂಗ್‌ ಕಟ್ಟುವುದು, ಕಾರ್ಯಕರ್ತರನ್ನು ಸೇರಿಸುವ ಕೆಲಸವನ್ನು ನಾವು ಮಾಡುತ್ತಿದ್ದೆವು. ಅವರು ಕಾರ್ಯಕ್ರಮಕ್ಕೆ ಬಂದು ಭಾಷಣ ಬಿಗಿಯುತ್ತಿದ್ದರು. ಅದೇ ಅವರು ಪಕ್ಷ ಸಂಘಟಿಸಿದ ಪರಿ. ಒಮ್ಮೆ ಪಕ್ಷದ ಕಾರ್ಯಕ್ರಮವೊಂದರ ಬ್ಯಾನರ್‌ನಲ್ಲಿ ಅವರ ಫೋಟೊ ಇಲ್ಲದ್ದಕ್ಕೆ ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಬಳಿಕ ಕೆ. ವೆಂಕಟೇಶ್‌ ಅವರನ್ನು ಸಂಧಾನಕ್ಕೆ ದೊಡ್ಡಗೌಡರು ಕಳುಹಿಸಿಕೊಟ್ಟಿದ್ದರು. ಇಂಥ ವ್ಯಕ್ತಿ ಮುಖ್ಯಮಂತ್ರಿ ಸ್ಥಾನವನ್ನು ಬೇರೊಬ್ಬರಿಗೆ ಬಿಟ್ಟುಕೊಡುತ್ತಾರ ಎಂದು ಪ್ರಶ್ನಿಸಿದರು.

ವೇದಿಕೆಗಳಲ್ಲಿ ದೊಡ್ಡಗೌಡರ ಪಕ್ಕ ಕಾಲಮೇಲೆ ಕಾಲು ಹಾಕಿಕೊಂಡು ಕುಳಿತಿದ್ದಲ್ಲದೇ ಚಪ್ಪಲಿ ಕಾಲಿನಲ್ಲಿ ಒದ್ದುಕೊಂಡು ಕುಳಿತುಕೊಳ್ಳುತ್ತಿದ್ದರು. ಇದನ್ನೆಲ್ಲಾ ನಾವು ನೋಡಿದ್ದೇವೆ ಎಂದು ಸಿದ್ಧರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದರು.

ಆನೆ ಹೋದರೆ ನಾಯಿ ಬೊಗಳುತ್ತವೆ: ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣ ಮಾಡ್ತಿದ್ದಾರೆಂಬ ಶಾಸಕ ಜಮೀರ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಇಂತಹ ಹೇಳಿಕೆಗಳಿಗೆ ನಾವು ಉತ್ತರ ಕೊಡುವುದಕ್ಕೆ ಆಗುತ್ತಾ? ಬೀದಿಯಲ್ಲಿ ಆನೆ ಹೋಗುತ್ತಿದ್ದಾಗ ನಾಯಿಗಳು ಬೊಗಳುತ್ತವೆ, ಹಾಗಂತ ಎಲ್ಲದಕ್ಕೂ ಉತ್ತರ ಕೊಡುವುದಕ್ಕೆ ಸಾಧ್ಯವಾ? ನಾನು ಕಂಡವರ ಸೂಟ್ ಕೇಸ್ ಗೆ ಕೈಹಾಕಿದ್ದೇನೆ ಅಂದ್ಕೊಳ್ಳೋಣ. ಆದರೆ ಎಚ್‌.ಡಿ.ದೇವೆಗೌಡ ಸೂಟ್ ಕೇಸ್ ತರಲು ಬಂದಿದ್ದಾರೆ ಅಂದಿದ್ದಾರೆ. ನಾಲಿಗೆ ಇದೆ ಅಂತ ಹೊಲಸು ಮಾತನಾಡಿದ್ರೆ ಉತ್ತರಿಸಬೇಕಾ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ : ಭೂಕುಸಿತ ಪತ್ತೆಗೆ ಹೊಸ ಸ್ವದೇಶಿ ತಂತ್ರಜ್ಞಾನ ಸಿದ್ಧ: ಐಐಟಿ ಮಂಡಿ ರೂಪಿಸಿರುವ ತಂತ್ರಜ್ಞಾನ

Advertisement

ನಾನು ಇತ್ತೀಚೆಗೆ ಆರೆಸ್ಸೆಸ್‌ ಬಗ್ಗೆ ಮಾತನಾಡಿದ್ದನ್ನೇ ದೊಡ್ಡದು ಮಾಡಿದರು. ಆದರೆ ಅವರ ಪಕ್ಷದ ಪ್ರಧಾನಿಗಳೇ ಜಮ್ಮ ಕಾಶ್ಮೀರದಲ್ಲಿ ನೇಮಿಸಿರುವ ರಾಜ್ಯಪಾಲರು ಯಾವುದೋ ಅರ್ಜಿ ವಿಲೇವಾರಿಗೆ 300 ಕೋಟಿ ಪಡೆದಿದ್ದಾರೆ ಎಂದು ಹೇಳಿದ್ದಾರೆ. ಇದು ಅವರ ಸಿದ್ಧಾಂತವೇ? ದೇಶದಲ್ಲಿ ಹಿಂದುತ್ವ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಹಿಂದುತ್ವ ಈ ದೇಶದ ಬ್ರಾಂಡ್‌.
– ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next