Advertisement

ಕರೆಯದೆ ಇರುವವರ ಮನೆ ಬಾಗಿಲಿಗೆ ಹೋಗಲು ಆಗುತ್ತಾ : ಎಚ್ ಡಿಕೆ

01:57 PM Dec 01, 2021 | Team Udayavani |

ರಾಮನಗರ: ಕಾಂಗ್ರೆಸ್ ನಾಯಕರು ನಮಗೆ ಜೆಡಿಎಸ್ ಬೆಂಬಲ ಬೇಡವೆಂದು ಹೇಳಿದ್ದು, ಕರೆಯದೆ ಇರುವ ಮನೆಯವರ ಮನೆ ಬಾಗಿಲಿಗೆ ಹೋಗಲು ಆಗುತ್ತಾ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಬಿಡದಿಯಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು, ನವದೆಹಲಿಯಲ್ಲಿ ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬೇಟಿ ಬಗ್ಗೆ ಪ್ರತಿಕ್ರಿಯಿಸಿ, ‘ನರೇಂದ್ರ ಮೋದಿ ಅವರಿಗೆ ದೇವೇಗೌಡರ ಮೇಲೆ ಅಪಾರ ವಿಶ್ವಾಸ ಹಾಗೂ ಗೌರವ ಇದೆ. ಹಾಸನದ ಐಐಟಿ ಸ್ಥಾಪನೆ ವಿಚಾರದಲ್ಲಿ ದೇವೇಗೌಡರು ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಚುನಾವಣಾ ಮೈತ್ರಿ ಬಗ್ಗೆ ಮಾತುಕತೆ ನಡೆಸಿರುವ ಬಗ್ಗೆ ಮಾಹಿತಿ ಇಲ್’ ಎಂದರು.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ವಿಚಾರದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಸಿದ ಅವರು, ‘ಬಿ.ಎಸ್.ಯಡಿಯೂರಪ್ಪ ಅವರು ಈಗಾಗಲೇ ಬಹಿರಂಗವಾಗಿ ಬೆಂಬಲ ಕೇಳಿದ್ದಾರೆ. ದೇವೇಗೌಡರು ದೆಹಲಿಯಿಂದ ಬಂದ ನಂತರ ಮೈತ್ರಿ ಬಗ್ಗೆ ಮಾತುಕತೆ ಮಾಡುವೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next