Advertisement

ಸಿದ್ದರಾಮಯ್ಯನವರದ್ದು ಅನುಕಂಪ ಗಿಟ್ಟಿಸುವ ನಾಟಕ: ಎಚ್ ಡಿ ಕುಮಾರಸ್ವಾಮಿ

11:54 AM Oct 10, 2021 | Team Udayavani |

ಬೆಂಗಳೂರು: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ನಡುವಿನ ಮಾತಿನ ಸಮರ ಮುಂದುವರಿದಿದೆ. ಇಂದು ಟ್ವೀಟ್ ಮಾಡಿರುವ ಎಚ್ ಡಿಕೆ, ಸಿದ್ದರಾಮಯ್ಯನವರದ್ದು ಅನುಕಂಪ ಗಿಟ್ಟಿಸುವ ನಾಟಕ ಎಂದು ಟೀಕಿಸಿದ್ದಾರೆ.

Advertisement

ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತದೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ:ಐಫೋನ್‍ ಗೂ ಇಎಂಐ -ಗೋಲ್ಗಪ್ಪಕ್ಕೂ ಇಎಂಐ! ‘ಪೋಸ್ಟ್ ಪೇ’: ಸಾಲ ನೀಡುವ ಡಿಜಿಟಲ್‍ ಆ್ಯಪ್‍

ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ಸಿದ್ದಕಲೆ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ಸಿದ್ಧಹಸ್ತರು ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next