Advertisement

ಪರಿಷತ್‌ ಸದಸ್ಯರ ಜತೆ ಎಚ್ಡಿಕೆ ಮಾತುಕತೆ

11:00 PM Nov 11, 2019 | Team Udayavani |

ಬೆಂಗಳೂರು: ಮುಖ್ಯಮಂತ್ರಿಯಾಗಿದ್ದಾಗ ಸ್ಪಂದಿಸಲಿಲ್ಲ ಎಂದು ಮುನಿಸಿಕೊಂಡಿರುವ ಜೆಡಿಎಸ್‌ನ ವಿಧಾನಪರಿಷತ್‌ ಸದಸ್ಯರ ಜತೆ ಮಾತುಕತೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮುಂದಾಗಿದ್ದಾರೆ. ಭಾನುವಾರ ಮುಂಜಾನೆ ಲಂಡನ್‌ ಯಾತ್ರೆಯಿಂದ ಬೆಂಗಳೂರಿಗೆ ಬಂದ ಬಳಿಕ ಈ ನಿರ್ಧಾರ ಕೈಗೊಂಡಿದ್ದಾರೆ.

Advertisement

ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ನಾಯಕರಲ್ಲಿನ ಅಸಮಾಧಾನ ಹೋಗಲಾಡಿಸುವ ನಿಟ್ಟಿನಲ್ಲಿ ಮಂಗಳವಾರ ಸಂಜೆ ಜೆಪಿ ನಗರದ ತಮ್ಮ ನಿವಾಸದಲ್ಲಿ ಸಭೆ ನಡೆಸಿ ಅವರ ಸಮಸ್ಯೆ ಆಲಿಸಲು ಸಮಯ ನಿಗದಿಪಡಿಸಲಾಗಿದೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಸಮಸ್ಯೆ ಹಾಗೂ ಮನವಿಗೆ ಸ್ಪಂದಿಸಲಿಲ್ಲ.

ಶಾಸಕರಿಗೆ ಕೊಟ್ಟಷ್ಟು ಆದ್ಯತೆ ಕೊಡಲಿಲ್ಲ ಎಂದು ಹಿರಿಯ ನಾಯಕ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಇತ್ತೀಚೆಗೆ ತೂಪಲ್ಲಿ ಚಂದ್ರಶೇಖರ್‌, ಅಪ್ಪಾಜಿಗೌಡ, ಟಿ.ಎ.ಶರವಣ, ಮರಿತಿಬ್ಬೇಗೌಡ, ಶ್ರೀಕಂಠೇಗೌಡ ಅವರು ಸಭೆ ನಡೆಸಿ ತಿಪ್ಪೇಸ್ವಾಮಿ ಮೂಲಕ ದೇವೇಗೌಡರಿಗೆ ಸಂದೇಶ ರವಾನಿಸಿದ್ದರು. ದೇವೇಗೌಡರು ಮರು ದಿನ ತಮ್ಮ ನಿವಾಸದಲ್ಲಿ ಸಭೆ ಕರೆದು ಎಲ್ಲರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next