Advertisement

Ramanagara ಜಿಲ್ಲೆಗೆ ಮರುನಾಮಕರಣ ಮಾಡಿದರೆ ಆಮರಣಾಂತ ಉಪವಾಸ ಸತ್ಯಾಗ್ರಹ

08:09 PM Oct 26, 2023 | Team Udayavani |

ಬೆಂಗಳೂರು: ರಾಮನಗರ ಜಿಲ್ಲೆಗೆ ‘ಬೆಂಗಳೂರು ದಕ್ಷಿಣ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸರಕಾರ ಮುಂದಾದರೆ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಸವಾಲು ಹಾಕಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಬಗ್ಗೆ ನನಗೂ ಕನಸಿದೆ, ಆ ಕನಸಿಗಾಗಿ ನನಗೂ ಸವಾಲು ಇದೆ, ನೋಡೋಣ. ಆ ಜಿಲ್ಲೆಯ ಹೆಮ್ಮೆಯನ್ನು ಕಾಪಾಡಲು ಕೊನೆಯ ಕ್ಷಣದವರೆಗೂ ಹೋರಾಡುತ್ತೇನೆ. ಶಿವಕುಮಾರ್ ಅವರ ಕೊಡುಗೆಯನ್ನು ಪ್ರಶ್ನಿಸಿ ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಪಟ್ಟಿ ಮಾಡಲಿ ಎಂದು ಸವಾಲು ಹಾಕಿದರು.

2019 ರಲ್ಲಿ ಕಾಂಗ್ರೆಸ್-ಜೆಡಿ ಎಸ್ ಸಮ್ಮಿಶ್ರ ಸರಕಾರ ಪತನ ಗೊಂಡಿರುವ ವಿಚಾರ ರಾಮನಗರ ಜಿಲ್ಲೆಯ ಸುತ್ತ ಕೇಂದ್ರೀಕೃತವಾಗಿದೆ ಎಂಬ ಕುರಿತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಸವಾಲನ್ನು ಸ್ವೀಕರಿಸಿ ಯಾವುದೇ ಟಿವಿ, ಸುದ್ದಿ ವಾಹಿನಿಗಳಲ್ಲಿ ಅಥವಾ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಮುಕ್ತ ಚರ್ಚೆಗೆ ಸಿದ್ದ ಎಂದು ಮಾಜಿ ಸಿಎಂ ಹೇಳಿದರು.

ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸುತ್ತೇನೆ, ರಾಮನಗರದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದೇನೆ, ಜಿಲ್ಲೆಗೂ ನನಗೂ ವ್ಯಾವಹಾರಿಕ ಸಂಬಂಧವಿಲ್ಲ. ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿದರೆ ನನ್ನ ಪ್ರಾಣವನ್ನೇ ಪಣಕ್ಕಿಟ್ಟು, ಅನಾರೋಗ್ಯದ ನಡುವೆಯೂ ಆಮರಣಾಂತ ಉಪವಾಸ ಕೂರಲು ಸಿದ್ಧ ಎಂದು ಕುಮಾರಸ್ವಾಮಿ ಹೇಳಿದರು.

ಶಿವಕುಮಾರ್ ಪ್ರಕಾರ, ಪ್ರಸ್ತಾವಿತ ಬೆಂಗಳೂರು ದಕ್ಷಿಣ ಜಿಲ್ಲೆ ಐದು ತಾಲೂಕುಗಳನ್ನು ಒಳಗೊಂಡಿರಲಿದ್ದು ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ, ಹಾರೋಹಳ್ಳಿಯಾಗಿದ್ದು, ರಾಮನಗರ ತಾಲೂಕು ಕೇಂದ್ರವಾಗಲಿದೆ.

Advertisement

2007ರ ಆಗಸ್ಟ್‌ನಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ರಾಮನಗರ, ಚನ್ನಪಟ್ಟಣ, ಮಾಗಡಿ ಮತ್ತು ಕನಕಪುರ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆ ರಚನೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next