Advertisement

ರೈತರ ಹೋರಾಟದಲ್ಲಿ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ : HDK

06:57 PM Jan 25, 2021 | Team Udayavani |

ಬೆಂಗಳೂರು : ರೈತ ಕ್ರಾಂತಿಯ ಹೋರಾಟದ ಕಿಚ್ಚಿಗೆ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅದಕ್ಕೆ ರೈತರು ಬಲಿಯಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರಿಗೆ ಕಿವಿಮಾತು ಹೇಳಿದ್ದಾರೆ.

Advertisement

ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಈ ರೀತಿಯಾಗಿ ಹೇಳಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು.

ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಕೈಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನು ತೋರಬೇಕು ಎಂದಿದ್ದಾರೆ.

ಅಲ್ಲದೆ ರೈತರ ಸಮಸ್ಯೆಗಳ ಪರಿಹಾರಕ್ಕೆ ನಡೆಯುವ ಹೋರಾಟಕ್ಕೆ ಜೆಡಿಎಸ್ ಸದಾ ಬೆಂಬಲ ನೀಡುತ್ತಿದೆ. ರೈತರ ಅಭ್ಯುದಯಕ್ಕಾಗಿ ದುಡಿದ ಮತ್ತು ದುಡಿಯುವ ಏಕೈಕ ಪಕ್ಷವೆಂದರೆ ಅದು ಜೆಡಿಎಸ್ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಂಡ್ಯ : ಕ್ಷುಲ್ಲಕ ವಿಚಾರಕ್ಕೆ ಹಾಡಹಗಲೇ ದುಷ್ಕರ್ಮಿಗಳಿಂದ ಯುವಕನ ಹತ್ಯೆ

Advertisement

ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ರಾಜ್ಯದಲ್ಲಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾದರೆ ಅದಕ್ಕೆ ತಕ್ಕ ಪಾಠ ಕಲಿಯಬೇಕಾಗುತ್ತದೆ. ರೈತರ ಶಾಂತಿಯುತ ಪ್ರತಿಭಟನೆಗೆ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಡಬೇಕು. ರೈತ ಕ್ರಾಂತಿಯ ಹೋರಾಟದ ಕಿಚ್ಚಿಗೆ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅದಕ್ಕೆ ರೈತರು ಬಲಿಯಾಗಬಾರದು ಎಂಬುದು ನನ್ನ ಕಿವಿಮಾತು ಎಂದಿದ್ದಾರೆ.

ಸಂಕಷ್ಟಕ್ಕೆ ಸಿಲುಕಿದ ರೈತರ ಕ್ರಾಂತಿಯ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ. ರೈತ ಕ್ರಾಂತಿಯನ್ನು ಹಾದಿ ತಪ್ಪಿಸುವ ಹುನ್ನಾರಗಳಿಗೆ ಮಣಿಯದಿದ್ದರೆ ನೈಜ ಕಳಕಳಿಯ ಹೋರಾಟ ತಾರ್ಕಿಕ ಅಂತ್ಯ ಕಂಡು ಗೆಲವು ಆಗುತ್ತದೆ ಎಂಬುದು ಪ್ರಾಮಾಣಿಕ ಅನಿಸಿಕೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next